ದೀಪಾವಳಿಗೂ ಮುನ್ನ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್

ದೀಪಾವಳಿಗೂ ಮುನ್ನ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ವರ್ಗಾವಣೆಯಾಗಿದೆ. ಈ ಮೂರು ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ.

ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಇದೀಗ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜುಲೈ, ಆಗಸ್ಟ್ ತಿಂಗಳ 2000 ರೂ. ವರ್ಗಾವಣೆ ಆಗಿದ್ದು, ಸದ್ಯ ಬಾಕಿ ಇರುವ ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗಿದೆ.

ಗೃಹಲಕ್ಷ್ಮಿ ಹಣ ಸ್ಟೇಟಸ್ ತಿಳಿದುಕೊಳ್ಳುವ ವಿಧಾನ ಹೀಗಿದೆ ನೋಡಿ, ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿ, ಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ, ಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ, ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕಿ, ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ನಂಬರ್ ಗೆ ಬಂದು ಇರುವ ಓಟಿಪಿಯನ್ನು ಹಾಕಿ, ನಂತರ ನಾಲ್ಕು ಡಿಜಿಟ್ ಇರುವ ಯಾವುದೇ ಕೋಡನ್ನು ಕ್ರಿಯೇಟ್ ಮಾಡಿ, ನಂತರ ಮುಖಪುಟದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಎಲ್ಲಾ ವಿವರಗಳನ್ನು ನೀವು ತುಂಬಾ ಸುಲಭವಾಗಿ ತಿಳಿದುಕೊಳ್ಳಬಹುದು

Leave a Reply

Your email address will not be published. Required fields are marked *