ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತ. ಜನರ ಪರದಾಟ. | Gurjapur Bridge

ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತ. ಜನರ ಪರದಾಟ. | Gurjapur Bridge

ರಾಯಚೂರು : ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ.

ಇದರಿಂದ ಗುರ್ಜಾಫುರ ಬ್ರಿಡ್ಜ್ ಕಂ ಬ್ಯಾರೇಜ್ ನ 194 ಗೇಟ್ ಓಪನ್ ಮಾಡಲಾಗಿದ್ದು, ಬ್ರಿಡ್ಜ್ ಮೇಲೆ ವಾಹನಗಳ ಓಡಾಟಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ರಾಯಚೂರು-ಯಾದಗಿರಿ ರಸ್ತೆ ಸಂಪರ್ಕ ಬಂದ್ ಆಗಿದೆ. ಎರಡು ಜಿಲ್ಲೆಗಳ ಸುಮಾರು 30 ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *