ಹಾಸನಾಂಬೆ ದೇಗುಲದ ಬಾಗಿಲು ಬಂದ್: ಈ ವರ್ಷ 26 ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ, ಆದಾಯ 2.18 ಕೋಟಿ ರೂ.!

ಹಾಸನಾಂಬೆ ದೇಗುಲದ ಬಾಗಿಲು ಬಂದ್: ಈ ವರ್ಷ 26 ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ, ಆದಾಯ 2.18 ಕೋಟಿ ರೂ.!

ಹಾಸನ: ಹಾಸನದ ಅಧಿದೇವತೆ, ವರ್ಷಕ್ಕೊಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಸಾರ್ವಜನಿಕರ ದರ್ಶನಕ್ಕೆ ಬುಧವಾರವೇ ಬಂದ್ ಆಗಿತ್ತು. ಇದೀಗ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಇನ್ನು ಮುಂದಿನ ವರ್ಷ 29-10-2026 ರಿಂದ 11-11-2026 ರವರೆಗೆ ತೆರೆಯಲಿದೆ. ಈ ವರ್ಷ ಭೇಟಿ ನೀಡಿದ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಆದಾಯವೂ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ. ಈ ಬಗ್ಗೆ ಹಾಸನದ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಶಾಸಕರು, ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮಾತನಾಡಿದ ಕೃಷ್ಣಭೈರೇಗೌಡ, 2025 ನೇ ವರ್ಷದ ಹಾಸನಾಂಬೆ ದರ್ಶನ ಮುಕ್ತಾಯ ಆಗಿದೆ. ಬುಧವಾರ ಸಾರ್ವಜನಿಕ ದರ್ಶನ ಮುಗಿದಿದ್ದು, ಉಳಿದಂತೆ ಸ್ಥಳೀಯರಿಗೆ ರಾತ್ರಿ ಕೂಡ ದರ್ಶನ ಆಗಿದೆ. ಶಾಸ್ತ್ರದ ಪ್ರಕಾರ ದೇವಾಲಯದ ಬಾಗಿಲು ಬಂದ್ ಮಾಡಲಾಗಿದೆ. ಎಲ್ಲ ಸಹಕಾರದಿಂದ, ಶಾಸಕರು, ಸಂಸದರ ಸಹಕಾರ ಹಾಗೂ ಜಿಲ್ಲಾಡಳಿತ ಸಹಕಾರದಿಂದ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ನಡೆದಿದೆ. ಅದಿಕಾರಿಗಳು ಶ್ರಮ‌ ವಹಿಸಿ ಕೆಲಸ ಮಾಡಿದ್ದಾರೆ ಎಂದರು.

ಹಾಸನಾಂಬೆ ಉತ್ಸವ ಯಶಸ್ವಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದ ಸಚಿವರು, ಹಿಂದಿನ ಎಲ್ಲ ವರ್ಷಗಳಿಗಿಂತ ಈ ಬಾರಿ ಅತ್ಯಂತ ಯಶಸ್ವಿಯಾಗಿ ದರ್ಶನ ನಡೆದಿದೆ. ಸಾಮಾನ್ಯ ಜನರಿಗೆ ನೂಕು ನುಗ್ಗಲು ಇಲ್ಲದೆ ಸರಳವಾಗಿ ಭಕ್ತರ ದರ್ಶನ ಆಗಿದೆ. ಇದು ನಮಗೆ ಅತೀವ ಸಂತೋಷ ನೀಡಿದೆ. ಎಲ್ಲಾ ಜನರು ನಗುನಗುತ್ತಾ ದರ್ಶನ ಮಾಡಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಭಕ್ತರು ಬಂದಿದ್ದಾರೆ. ಹಾಸನದ ಕೀರ್ತಿ ಎಲ್ಲೆಡೆ ಪ್ರಜ್ಚಲಿಸಿದೆ ಎಂದು ಅವರು ತಿಳಿಸಿದರು.

ಈ ವರ್ಷ 26,13000 ಭಕ್ತರು ದರ್ಶನ ಮಾಡಿದ್ದಾರೆ. ಟಿಕೆಟ್ ಹಾಗೂ ಲಡ್ಡು ಮಾರಾಟದಿಂದ 2,18,20,000 ರೂ. ಆದಾಯ ಬಂದಿದೆ. ಕಳೆದ ವರ್ಷಕ್ಕಿಂದ ಆದಾಯ ಕೂಡ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *