ಹಾವೇರಿ || ಹಾವೇರಿಯಲ್ಲಿ ಜನಾಕ್ರೋಶ ಯಾತ್ರೆ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಮಂಗಳೂರು || ರಾಜ್ಯ ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುವ ಪೊಲೀಸ್ ಇಲಾಖೆ ಒತ್ತಡಕ್ಕೆ ಮಣಿದು ಬೆದರಿಕೆ ಹಾಕದಿರಿ: Vijayendra

ಹಾವೇರಿ: ಕಾಂಗ್ರೆಸ್ ಅಡಳಿತವಿರುವ ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಅದೇ ಪರಿಸ್ಥಿತಿ ರಾಜ್ಯದಲ್ಲಿಯೂ ಉದ್ಭವಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಹಾವೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಯಾತ್ರೆ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದ್ಮಲೆ ಐದು ಗ್ಯಾರಂಟಿ ಜೊತೆಗೆ ಬೆಲೆ ಏರಿಕೆ ಗ್ಯಾರಂಟಿ ಸಹ ಸಿಕ್ಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತ ಒಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳ ಹಣವನ್ನ ದುರುಪಯೋಗ ಮಾಡಿಕೊಂಡ ಸರ್ಕಾರ ಇದು. ರೈತರ, ಬಡವರ ವಿರೋಧಿ ಸರ್ಕಾರವನ್ನ ಸಿಎಂ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಅವರದ್ದು ಜಾಹೀರಾತು ಸರ್ಕಾರವಾಗಿದ್ದು, ಅಭಿವೃದ್ಧಿ ಕೆಲಸ ಬಿಟ್ಟು ಸರ್ಕಾರದ ಹಣವನ್ನು ದುಂದುವೆಚ್ಚ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಿವಿ ಮಾತು ಹೇಳಿದ್ದಾರೆ. ನೀವು ಕಿತ್ತಾಟ ಮಾಡಿದರೆ ಬಿಜೆಪಿ ಅವರು ಸರ್ಕಾರ ಬೀಳಿಸುತ್ತಾರೆ ಅಂತಾ ಹೇಳಿದ್ದಾರೆ. ಆದರೆ. ನಾವು ಸರ್ಕಾರ ಅಸ್ಥಿರಗೊಳಿಸುತ್ತಿಲ್ಲ

ಕಾಂಗ್ರೆಸ್ ಸರ್ಕಾರವನ್ನ ಅಸ್ಥಿರಗೊಳಿಸುವ ಕೆಲಸವನ್ನ ಕಾಂಗ್ರೆಸನವರೇ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಅಭಿವೃದ್ಧಿಗೆ ಅನುದಾನ ಇಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ; ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಅನುಧಾನ ಇಲ್ಲ. ಸಿಎಂ ಸಿದ್ದರಾಮಯ್ಯ ಕಾರ್ಯದರ್ಶಿ ಬಸವರಾಜ್ ರಾಯರೆಡ್ಡಿ ಭ್ರಷ್ಟಾಚಾರದಲ್ಲಿಯೇ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಅಂತಾ ಅವರೇ ಹೇಳಿದ್ದಾರೆ ಎಂದು ವಿಜಯೇಂದ್ರ ನೆನಪಿಸಿದರು.

ರಾಜ್ಯದಲ್ಲಿ ಸದ್ಯ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದರೇ ಅವು ಸಿದ್ದರಾಮಯ್ಯ ಸರ್ಕಾರದಲ್ಲಾದ ಅಭಿವೃದ್ದಿ ಕಾರ್ಯಗಳಲ್ಲ. ಈ ಹಿಂದಿನ ಸಿಎಂಗಳಾಗಿದ್ದ ಯಡಿಯೂರಪ್ಪ ಮತ್ತು ಬೊಮ್ಮಾಯಿ ನೀಡಿದ ಅನುದಾನದಲ್ಲಿ ಈ ಅಭಿವೃದ್ಧಿ ಕಾಮಗಾರಿಗಳು ರಾಜ್ಯದಲ್ಲಿ ನಡೆಯುತ್ತಿವೆ ಎಂದು ವಿಜಯೇಂದ್ರ ತಿಳಿಸಿದರು.

ಸರ್ಕಾರದ್ದು ಮುಸ್ಲೀಂ ಓಲೈಕೆ ನೀತಿ: ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಮೀಸಲಾತಿ, ಹೊರದೇಶಗಳಲ್ಲಿ ಓದಲು ಅನುದಾನ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಹಿಂದೂಗಳು ಯಾರೂ ಮತ ಹಾಕಿಲ್ಲವೇ ಎಂದು ವಿಜಯೇಂದ್ರ ಇದೇ ವೇಳೆ ಪ್ರಶ್ನಿಸಿದರು. ರಾಜ್ಯದಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಕರಿಗೆ ಸರಿಯಾದ ವೇತನ ಆಗುತ್ತಿಲ್ಲ. ಸಿದ್ದರಾಮಯ್ಯ ಸರ್ಕಾರದಲ್ಲಿ ಬಡವನ ಮನೆ ಕಳೆದುಕೊಂಡರೆ, ಬಿಕ್ಷೆ ಕೊಟ್ಟಹಾಗೆ 75 ಸಾವಿರ ಮತ್ತು ಒಂದು ಲಕ್ಷ ರುಪಾಯಿ ನೀಡುತ್ತಿದೆ ಎಂದು ವಿಜಯೇಂದ್ರ ಇದೇ ವೇಳೆ ಗಂಭೀರ ಆರೋಪ ಮಾಡಿದರು.

ರೈತರು ಎರಡೂವರೆ ಲಕ್ಷ ರುಪಾಯಿ ಕೊಟ್ಟು ಪಂಪಸೆಟ್ ಹಾಕಿಸುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಆಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *