ಕನಾಟಕದಾಧ್ಯಂತ ಮಳೆ ಅಬ್ಬರ : ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ || ಜಿಲ್ಲೆಯಲ್ಲಿ ವರುಣಾರ್ಭಟ : schools, colleges ರಜೆ

ಬೆಂಗಳೂರು/ಮೈಸೂರು: ಪೆಂಗಲ್ ಚಂಡಮಾರುತದ ಪರಿಣಾಮ ನಿರಂತರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (ದ್ವಿತೀಯ ಪಿಯುಸಿ ವರೆಗೆ) ರಜೆ ಘೋಷಣೆ ಮಾಡಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲಾಡಳಿತಗಳು ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿವೆ.

ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ .ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದ್ದಾರೆ.

ಚಾಮರಾಜನಗರದಲ್ಲೂ ರಜೆ ಘೋಷಣೆ: ಫೆಂಗಲ್ ಚಂಡಮಾರುತ ಹಿನ್ನೆಲೆ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶಿಸಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತು ಪಡಿಸಿ ರಜೆ ಘೋಷಣೆ ಮಾಡಲಾಗಿದೆ. ಇಂದಿನ ರಜೆ ಅವಧಿಯನ್ನು ಭಾನುವಾರ ತರಗತಿ ನಡೆಸಿ ಸರಿದೂಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮಾದಪ್ಪನ ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಂ: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ಆನೆ ತಲೆದಿಂಬ ಎಂಬಲ್ಲಿ ಮರಬಿದ್ದು ತಡರಾತ್ರಿ ನಾಲ್ಕು ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಕಾರ್ಯಾಚರಣೆ ನಡೆಸಿ ತೆರವು ಮಾಡಿ ಮತ್ತೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅಮಾವಾಸ್ಯೆ ಹಿನ್ನೆಲೆ ಸಹಸ್ರಾರು ಮಂದಿ ಭಕ್ತರು ದೇಗುಲಕ್ಕೆ ಆಗಮಿಸಿದ್ದರು.

ಪೊನ್ನಾಚಿಯಲ್ಲಿ ಅತ್ಯಧಿಕ ಮಳೆ ದಾಖಲು: ಚಾಮರಾಜನಗರ ಜಿಲ್ಲೆಗೆ ಹವಾಮಾನ ಇಲಾಖೆಯು ಇಂದು ಆರೆಂಜ್ ಅಲರ್ಟ್ ಕೊಟ್ಟಿದೆ. ಇಂದು ಬಹುತೇಕ ಕಡೆ ಸಾಧಾರಣ ಮಳೆ, ಅಲ್ಲಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸೋಮವಾರ ಬೆಳಗ್ಗೆ 7.30ಕ್ಕೆ ರಾಜ್ಯದಲ್ಲಿ ಅತ್ಯಧಿಕ ಮಳೆ ಪ್ರಮಾಣ ಹನೂರು ತಾಲೂಕಿನ ಪೊನ್ನಾಚಿಯಲ್ಲಿ ದಾಖಲಾಗಿದ್ದು 94 ಮಿ.ಮೀ ಮಳೆ ಸುರಿದಿದೆ ಎಂದು ತಿಳಿಸಿದೆ.

ರಾಮನಗರದಲ್ಲಿ ಆರೆಂಜ್ ಅಲರ್ಟ್: ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯ ಮೇಲೂ ಬೀರಿದ್ದು, ಹವಾಮಾನ ಇಲಾಖೆ ನಿನ್ನೆ ರಾತ್ರಿಯಿಂದಲೇ ಯೆಲ್ಲೋ ಹಾಗೂ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ. ಜಿಲ್ಲೆಯಲ್ಲಿ ರಾತ್ರಿಯಿಂದಲೂ ನಿರಂತರ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಂಡ್ಯದಲ್ಲಿ ಫೆಂಗಲ್ ಎಫೆಕ್ಟ್: ಫೆಂಗಲ್ ಚಂಡಮಾರುತದ ಎಫೆಕ್ಟ್ನಿಂದ ಮಂಡ್ಯ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *