ದಾರಿಯಲ್ಲಿ ಸಿಕ್ಕ ₹1.45 ಲಕ್ಷ ರೈತನಿಗೆ ಹಿಂತಿರುಗಿಸಿದ ಪ್ರಾಮಾಣಿಕ ಪೊಲೀಸ್! ಯಾದಗಿರಿಯಲ್ಲಿ ಮಾನವೀಯತೆ ಮೆರೆದ ಕಾನ್ಸ್ಟೇಬಲ್.

ದಾರಿಯಲ್ಲಿ ಸಿಕ್ಕ ₹1.45 ಲಕ್ಷ ರೈತನಿಗೆ ಹಿಂತಿರುಗಿಸಿದ ಪ್ರಾಮಾಣಿಕ ಪೊಲೀಸ್! ಯಾದಗಿರಿಯಲ್ಲಿ ಮಾನವೀಯತೆ ಮೆರೆದ ಕಾನ್ಸ್ಟೇಬಲ್.

ಯಾದಗಿರಿ : ದಾರಿಯಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ಮರಳಿಸಿ ಪೊಲೀಸ್​​ ಕಾನ್ಸ್​ಟೇಬಲ್​ ಪ್ರಾಮಾಣಿಕತೆ ಮೆರೆದ ಪ್ರಸಂಗ ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹತ್ತಿ ಬೆಳೆ ಮಾರಿ ಮನೆಗೆ ಹೋಗುವಾಗ ರೈತ ಗೌಡಪ್ಪ ಪಾಟೀಲ್ ರಸ್ತೆಯಲ್ಲಿ 1 ಲಕ್ಷದ 47 ಸಾವಿರ ರೂ. ಹಣವನ್ನು ಕಳೆದುಕೊಂಡಿದ್ದರು.

ಅದೇ ದಾರಿಯಲ್ಲಿ ಆಗಮಿಸಿದ ಸುರಪುರ ಪೋಲಿಸ್ ಠಾಣೆಯ ಕಾನ್ಸ್​ಟೇಬಲ್​ ದಯಾನಂದ ಜಮಾದರ್​​ ಅವರಿಗೆ ಆ ಹಣ ಸಿಕ್ಕಿದ್ದು, ಠಾಣೆ ಪಿಐ ಉಮೇಶ್​ ನಾಯಕ ನೇತೃತ್ವದಲ್ಲಿ ರೈತ ಗೌಡಪ್ಪಗೆ ಹಣ ವಾಪಸ್​ ಮಾಡಿದ್ದಾರೆ. ಸುರಪುರ ಪೋಲಿಸರ ಕಾರ್ಯಕ್ಕೆ ರೈತ ಗೌಡಪ್ಪ ಮತ್ತು ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *