ಧಾರವಾಡ:ದೇಶವನ್ನೇ ಬೆಚ್ಚಿಬೀಳಿಸಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಆರೋಪಿ ಫಯಾಜ್ ಜಾಮೀನು ಅರ್ಜಿಗೆ ಧಾರವಾಡ ಹೈಕೋರ್ಟ್ ಸೋಲು ತೋರಿಸಿದೆ. ಇದಕ್ಕೂ ಮೊದಲು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಫಯಾಜ್ ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ಹಂತಕ ಫಯಾಜ್ಗೆ ಈಗ ಜೈಲು ಜೀವನವೇ ಗತಿ ಎಂಬಂತಾಗಿದೆ.
ಪ್ರಕರಣದ ಹಿನ್ನೆಲೆ:
2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (24) ಅವರನ್ನು ಫಯಾಜ್ ಎಂಬಾತ 10 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಘಟನೆ ಬಳಿಕ ಪರಾರಿಯಾದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಫಯಾಜ್ ಕೊಂಡುನಾಯ್ಕ್ (24) ಎಂದು ಗುರುತಿಸಿ ಪೊಲೀಸರು ಬಂಧಿಸಿದ್ದರು.
ಈ ಕೊಲೆ ಪ್ರಕರಣವು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
ಕಾನೂನು ಹೋರಾಟದಲ್ಲಿ ಸೋತ ಫಯಾಜ್:
ಮೊದಲು ಹುಬ್ಬಳ್ಳಿ ಜಿಲ್ಲಾ ಕೋರ್ಟ್ ಫಯಾಜ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ಹೈಕೋರ್ಟ್ ಮೊರೆ ಹೋಗಿದ್ದರೂ, ಅಲ್ಲಿ ಸಹ ಅರ್ಜಿ ವಜಾ ಮಾಡಲಾಗಿದೆ. ಹೀಗಾಗಿ, ಫಯಾಜ್ಗೆ ಈಗ ಜಾಮೀನು ಸಿಗದೇ ಜೈಲಲ್ಲೇ ಉಳಿಯಬೇಕಾದ ಪರಿಸ್ಥಿತಿ ಎದುರಾಗಿದೆ.
For More Updates Join our WhatsApp Group :