Hubballi || ರಾಡ್​ ಬಿದ್ದು ಎಎಸ್​ಐ ಸಾವು : ಸಂತೋಷ್​ ಲಾಡ್​ ಸಂತಾಪ

ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಎಎಸ್​ಐ ಸಾವು

ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಎಎಸ್​ಐ ಸಾವು

ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೆಪ್ಟೆಂಬರ್​ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಎಎಸ್​ಐ ನಾಭಿರಾಜ್ ದಯಣ್ಣವರ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಇಂದು ಚಿಕಿತ್ಸೆ ಫಲಿಸದೆ ಎಎಸ್​ಐ ನಾಭಿರಾಜ್ ದಯಣ್ಣವರ ಸಾವನ್ನಪ್ಪಿದ್ದಾರೆ.

ಇನ್ನು ಎಎಸ್​ಐ ನಾಭಿರಾಜ್ ದಯಣ್ಣವರ ಸಾವಿಗೆ ಸಂಬಂಧಿಸಿದಂತೆ ಅವರ ಪುತ್ರ ರುಷಭ್ ದೂರು ದಾಖಲಿಸಿದ್ದು, ಗುತ್ತಿಗೆದಾರರ ನಿರ್ಲಕ್ಷ್ಯ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಝಂಡು ಕನ್​ಸ್ಟ್ರಕ್ಷನ್ ನಿರ್ದೇಶಕರಾದ ರಾಮ್‌ಕುಮಾರ್, ಮೋಹಿತ್ ಮತ್ತು ಮನುದೀಪ್, ಯೋಜನಾ ನಿರ್ದೇಶಕ, ಎಂಜಿನಿಯರ್, ಸುರಕ್ಷತಾ ಅಧಿಕಾರಿ, ಕ್ರೇನ್ ಆಪರೇಟರ್ ಮತ್ತು ಕಾರ್ಮಿಕರ ವಿರುದ್ಧ ದೂರು ದಾಖಲಿಸಿದ್ದಾರೆ.

ಎಎಸ್​ಐ ನಾಭಿರಾಜ್ ದಯಣ್ಣವರ ಗುಣಮುಖರಾಗಲು ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು. ಆದರೆ, ಈ ತರಹ ಆಗಬಾರದಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಎಸ್​ಐ ನಾಭಿರಾಜ್ ದಯಣ್ಣವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದೇನೆ. ಕರ್ನಾಟಕದಲ್ಲಿ ಎಲ್ಲೆಲ್ಲಿ ಕಾಮಗಾರಿ ನಡೆಯುತ್ತಿದೆ, ಅಲ್ಲಿ ಗುತ್ತಿಗೆದಾರರು ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

Leave a Reply

Your email address will not be published. Required fields are marked *