ಹುಬ್ಬಳ್ಳಿ ಶಬರಿಮಲೆ ರೈಲು: ಅಯ್ಯಪ್ಪ ಭಕ್ತರಿಗಾಗಿ ನೈಋತ್ಯ ರೈಲ್ವೇಸ್ ವಿಶೇಷ ಕೊಡುಗೆ.

ಹುಬ್ಬಳ್ಳಿ ಶಬರಿಮಲೆ ರೈಲು: ಅಯ್ಯಪ್ಪ ಭಕ್ತರಿಗಾಗಿ ನೈಋತ್ಯ ರೈಲ್ವೇಸ್ ವಿಶೇಷ ಕೊಡುಗೆ.

ಬೆಂಗಳೂರು : ಕರ್ನಾಟಕದ ಅಯ್ಯಪ್ಪ ಸ್ವಾಮಿಯ ಭಕ್ತರಿಗಾಗಿ ನೈಋತ್ಯ ರೈಲ್ವೇ ವತಿಯಿಂದ 14 ವಿಶೇಷ ರೈಲುಗಳ ಸೌಲಭ್ಯ ಒದಗಲಿದೆ. ಈ 14 ಎಕ್ಸ್​ಪ್ರೆಸ್ ರೈಲುಗಳು ಕೇರಳದ ಹುಬ್ಬಳ್ಳಿ ಮತ್ತು ಕೊಲ್ಲಂ ಜಂಕ್ಷನ್​ಗಳ ನಡುವೆ ಬೆಂಗಳೂರು ಮೂಲಕ ಹಾದು ಹೋಗಲಿವೆ. ಇದರಿಂದಾಗಿ ಶಬರಿಮಲೆಗೆ ತೆರಳಲಿರುವ ಅಯ್ಯಪ್ಪ ಭಕ್ತರ ಪ್ರಯಾಣವು ಸುಲಭವಾಗಲಿದೆ.

ಈ ವಿಶೇಷ ರೈಲು ಸೌಲಭ್ಯಗಳು ದೊರೆಯುವುದು ಯಾವಾಗ?

ಈ ಹುಬ್ಬಳ್ಳಿ-ಕೊಲ್ಲಂ ವಿಶೇಷ ಎಕ್ಸ್​ಪ್ರೆಸ್ ರೈಲುಗಳು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 28ರ ವರೆಗೆ  ಭಾನುವಾರಗಳಂದು  ಪ್ರಯಾಣ ಸೌಲಭ್ಯ ಒದಗಿಸಲಿವೆ. ಮಧ್ಯಾಹ್ನ 3.15 ರಿಂದ ಹುಬ್ಬಳ್ಳಿಯಿಂದ ಹೊರಡುವ ರೈಲುಗಳು, ಮರುದಿನ ಮಧ್ಯಾಹ್ನ 12.55 ಕ್ಕೆ ಕೊಲ್ಲಂ ತಲುಪಲಿವೆ. ಮರಳಿ ಬರುವಾಗ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 29 ರವರೆಗೆ  ರೈಲುಗಳು ಸೊಮವಾರಗಳಂದು ಕಾರ್ಯನಿರ್ವಹಿಸಲಿವೆ. ಸಂಜೆ 5 ಗಂಟೆಗೆ ಕೊಲ್ಲಂನಿಂದ ವಾಪಾಸಾಗುವ ರೈಲುಗಳು ಮರುದಿನ ಸಂಜೆ 6.30 ಕ್ಕೆ ಹುಬ್ಬಳ್ಳಿ ತಲುಪಲಿವೆ.

ವಿಶೇಷ ರೈಲುಗಳಲ್ಲಿರುವ ಸೌಲಭ್ಯಗಳೇನು?

ಈ ರೈಲುಗಳಲ್ಲಿ ಒಂದು ಎಸಿ-2 ಟೈರ್, ಎರಡು- ಎಸಿ 3 ಟೈರ್ , 12 ಸ್ಲೀಪರ್​ಗಳು ಮತ್ತು 5 ಜನರಲ್​ ವಿಭಾಗಗಳು ಸೇರಿದಂತೆ 22 ರೈಲ್ವೆ ಬೋಗಿಗಳ ಸೌಲಭ್ಯವಿರಲಿದೆ. ವಿಶೇಷ ರೈಲುಗಳು ಮಾರ್ಗ ಮಧ್ಯೆ ಹಾವೇರಿ, ದಾವಣಗೆರೆ, ಬಿರೂರು, ಅರಸಿಕೆರೆ, ತುಮಕೂರು, ಎಸ್​ಎಂವಿಟಿ ಬೆಂಗಳೂರು ಮತ್ತು ಕೃಷ್ಣರಾಜಪುರಂ ಈ ಎಲ್ಲಾ ಜಾಗಗಳಲ್ಲಿ ನಿಲುಗಡೆ ಇರಲಿದೆ. ಶಬರಿಮಲೆಗೆ ತೆರಳುವ ಭಕ್ತಾದಿಗಳು ದೇವಸ್ಥಾನಕ್ಕೆ ಹತ್ತಿರವಿರುವ ಚೆಂಗನ್ನೂರು ರೈಲು ನಿಲ್ದಾಣದಲ್ಲಿ ಇಳಿಯಬಹುದೆಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *