ನನಗೂ ಇತ್ತು ಆಪರೇಷನ್ ಕಮಲದ ಆಮಿಷ..!

ದೇವನಹಳ್ಳಿ: ‘ಅಡ್ಡ ದಾರಿಯಲ್ಲಿ ಸರ್ಕಾರ ರಚನೆ ಮಾಡಿದ ಬಿಜೆಪಿಗರು, ಆಪರೇಷನ್ ಕಮಲದಲ್ಲಿ ನನ್ನನ್ನು ಸೆಳೆಯಲು ಯತ್ನಿಸಿದ್ದರು’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಆರೋಪಿಸಿದರು.

ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಬುಧವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ ಪಕ್ಷಕ್ಕೆ ಸೇರುವಂತೆ ಬಿಜೆಪಿಗರು ಸಚಿವ ಸ್ಥಾನ ನೀಡುವ ಆಮಿಷ ಒಡ್ಡಿದ್ದರು. ಆದರೆ ನಾನು ಹೋಗಲಿಲ್ಲ’ ಎಂದು ತಿಳಿಸಿದರು.

ರಾಜ್ಯ, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರಗಳು ಅಭಿವೃದ್ಧಿ ಹೆಸರಿನಲ್ಲಿ ಶೋಷಣೆ ಮಾಡುತ್ತಿವೆ. ಸುಳ್ಳ ಭರವಸೆ ನೀಡಿ ಮತದಾರರ ದಿಕ್ಕು ತಪ್ಪಿಸುತ್ತಿವೆ. ಅವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ದೊರೆಯಲಿದೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ದುರಾಡಳಿತದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಐಎಎಸ್, ಐಪಿಎಸ್ ಅಧಿಕಾರಿಗಳನ್ನು ನಿಯಂತ್ರಣ ತರಲು ಸಾಧ್ಯವಾಗದ ಸರ್ಕಾರ ಇನ್ನೂ ಯಾವ ರೀತಿ ಆಡಳಿತ ನಡೆಸುತ್ತದೆ ಎಂದು ಪ್ರಶ್ನಿಸಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ಮುನೇಗೌಡ, ಜಿಪಂ ಮಾಜಿ ಸದಸ್ಯರಾದ ಅಪ್ಪಯಣ್ಣ, ತಾಲ್ಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಕಲ್ಯಾಣ್ ಕುಮಾರ್ ಬಾಬು, ಕಾರ್ಯಾಧ್ಯಕ್ಷ ಲಕ್ಷ್ಮಣ್, ಮುನಿರಾಜು, ಪ್ರಚಾರ ಸಮಿತಿ ಅಧ್ಯಕ್ಷ ನೆರಗನಹಳ್ಳಿ ಶ್ರೀನಿವಾಸ್, ತಾಲ್ಲೂಕು ಸೊಸೈಟಿ ಅಧ್ಯಕ್ಷ ಎ.ದೇವರಾಜ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಪಟಾಲಪ್ಪ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ ಇದ್ದರು.

Pragati TV Social Connect for more latest u

Leave a Reply

Your email address will not be published. Required fields are marked *