IPL ಟಿಕೆಟ್​ಗಳು ಖಂಡಿತಾ ನನಗೆ ಬೇಡ.

IPL ಟಿಕೆಟ್​ಗಳು ಖಂಡಿತಾ ನನಗೆ ಬೇಡ.

ವಿಶೇಷ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್.

ಬೆಂಗಳೂರು: ಐಪಿಎಲ್ ಮ್ಯಾಚ್​ಗಳ ಟಿಕೆಟ್ ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್​ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್‌ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿಯೇ ಈ ರೀತಿಯ ಸ್ಪಂದನೆ ದೊರೆತಿರುವುದೂ ವಿವಾದವೆದ್ದಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಮ್ಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್​ಗಳನ್ನು ನಿರಾಕರಿಸಿದ್ದಾರೆ.

ಟಿಕೆಟ್ ಬೇಡವೆಂದು ಫೆಸ್​ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ

ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವಿಪಕ್ಷ ನಾಯಕ ಅಶೋಕ್ ಐಪಿಎಲ್ ಟಿಕೆಟ್​​ಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಿದ ಬೆನ್ನಲ್ಲೇ ಕೆಎಸ್‌ಸಿಎ ಉದ್ಘಾಟನಾ ಪಂದ್ಯಕ್ಕೆ ಶಾಸಕರಿಗೆ 2+1 ಒಟ್ಟು 3 ಟಿಕೆಟ್ ನೀಡಲು ಕೆಎಸ್‌ಸಿಎ ಒಪ್ಪಿಕೊಂಡಿದೆ. ಸದ್ಯ ಒಬ್ಬ ಶಾಸಕರಿಗೆ ಎರಡು ಟಿಕೆಟ್ ನೀಡಲು ಒಪ್ಪಿರುವ ಕೆಎಸ್‌ಸಿಎ, ಮುಂದಿನ‌ ಐಪಿಎಲ್‌ ಪಂದ್ಯಕ್ಕೆ 5 ಟಿಕೆಟ್ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದೆ. ಇದೆಲ್ಲದರ ನಡುವೆ ವಿಜಯೇಂದ್ರ ಟಿಕೆಟ್ ನಿರಾಕರಿಸಿದ್ದಲ್ಲದೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೂಡ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ತಾನು ಟಿಕೆಟ್ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್​ನಲ್ಲೇನಿದೆ?

ಶಾಸಕರು ಐಪಿಎಲ್ ಟಿಕೆಟ್ ಸ್ವೀಕರಿಸುವುದನ್ನು ಖಂಡಿಸಿರುವ ಸುರೇಶ್ ಕುಮಾರ್ , ಮಾಧ್ಯಮಗಳಲ್ಲಿ ಸುದ್ದಿಯಾಗಿರುವಂತೆ ಪ್ರತಿಯೊಬ್ಬ ಶಾಸಕರಿಗೆ ಎರಡು ಟಿಕೆಟ್ ಹಾಗೂ ಮುಂದಿನ ದಿನಗಳಲ್ಲಿ ಐದು ಟಿಕೆಟ್ ನೀಡುವ ವಿಷಯಕ್ಕೆ ತಮ್ಮ ಸ್ಪಷ್ಟ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಸರಿಯಾದ ನಿರ್ಧಾರವಲ್ಲ ಎಂದ ಶಾಸಕ, ವಿಧಾನಸಭೆಯಲ್ಲಿ ಚರ್ಚೆ ನಡೆದ 24 ಗಂಟೆಗಳಲ್ಲಿ ಸರ್ಕಾರ ತಕ್ಷಣ ಘೋಷಣೆ ಮಾಡಿರುವುದು ಆಶ್ಚರ್ಯಕರ. ಜನಪ್ರತಿನಿಧಿಗಳ ವಿಷಯ ಬಂದಾಗ ಮಾತ್ರ ಕಾರ್ಯ ಕೈಗೊಳ್ಳುವುದರಿಂದ ಸಾರ್ವಜನಿಕ ನಂಬಿಕೆಗೆ ಹೊಣೆ ಬರುತ್ತದೆ. ಆ ಟಿಕೆಟ್ ಅಥವಾ ಪಾಸ್‌ಗಳನ್ನು ನಾನು ಸವಿನಯವಾಗಿ ನಿರಾಕರಿಸುತ್ತೇನೆ. ವಿಐಪಿ ಸಂಸ್ಕೃತಿ ಮುಂದುವರಿದಂತೆ ರಾಜಕಾರಣಿಗಳು ಜನರ ದೃಷ್ಟಿಯಲ್ಲಿ ಇನ್ನಷ್ಟು ಕನಿಷ್ಠರಾಗುತ್ತಾರೆ ಎಂದು ಬರೆದುಕೊಂಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *