ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಎದುರಿಸಲು ಮತ್ತು ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ರಕ್ಷಿಸಲು ಜಾಗೃತಿ, ಕೌಶಲ್ಯ ನಿರ್ಮಾಣ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮತ್ತು ತಂತ್ರಜ್ಞಾನ ಏಕೀಕರಣವನ್ನು ಉತ್ತೇಜಿಸಲು ಸರ್ಕಾರವು ಗುರುವಾರ ಸಮಗ್ರ ಸೈಬರ್ ಭದ್ರತಾ ನೀತಿ 2024 ನ್ನು ಆರಂಭಿಸಿದೆ.

ಈ ನೀತಿಯು ಅರಿವು ಮತ್ತು ಶಿಕ್ಷಣ, ಕೌಶಲ್ಯ ನಿರ್ಮಾಣ, ಉದ್ಯಮ ಮತ್ತು ಸ್ಟಾರ್ಟ್‌ಅಪ್‌ಗಳ ಉತ್ತೇಜನ, ಸಾಮರ್ಥ್ಯ ವೃದ್ಧಿಗಾಗಿ ಪಾಲುದಾರಿಕೆ ಮತ್ತು ಸಹಯೋಗದಂತಹ ಹಲವಾರು ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಹೆಚ್ಚುತ್ತಿರುವ ಸೈಬರ್ ಭದ್ರತೆಯ ಪ್ರಾಮುಖ್ಯತೆಯನ್ನು ಗುರುತಿಸಿ, ನಮ್ಮ ನಾಗರಿಕರು ಮತ್ತು ಉದ್ಯಮಗಳಿಗೆ ಸುರಕ್ಷಿತ ಸೈಬರ್‌ಸ್ಪೇಸ್ ನ್ನು ಸ್ಥಾಪಿಸಲು ಈ ನೀತಿಯನ್ನು ನಿಖರವಾಗಿ ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಯತ್ನಗಳಿಗೆ ಹೊಂದಿಕೊಂಡಿರುವ ನೀತಿಯು ಸೈಬರ್ ಬೆದರಿಕೆಗಳನ್ನು ಎದುರಿಸುವಲ್ಲಿ ಕರ್ನಾಟಕದ ಪೂರ್ವಭಾವಿ ನಿಲುವನ್ನು ಎತ್ತಿ ತೋರಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

ಎರಡು ಭಾಗಗಳಲ್ಲಿ ನೀತಿ ಜಾರಿ: ಮೊದಲ ಭಾಗವು ಸಾರ್ವಜನಿಕ, ಶೈಕ್ಷಣಿಕ, ಉದ್ಯಮ, ಸ್ಟಾರ್ಟ್-ಅಪ್‌ಗಳು ಮತ್ತು ಸರ್ಕಾರವನ್ನು ಒಳಗೊಂಡಂತೆ ಸಮಾಜದ ಎಲ್ಲಾ ವಿಭಾಗಗಳಲ್ಲಿ ಬಲವಾದ ಸೈಬರ್ ಭದ್ರತಾ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

ಈ ನೀತಿಯನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಹ ಪರಿಶೀಲಿಸಿದೆ, ಇದು ರಾಜ್ಯದ ಕೆ-ಟೆಕ್ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಸೈಬರ್ ಸೆಕ್ಯುರಿಟಿ (CySecK) ಗಾಗಿ ಆಧಾರ ಸಂಸ್ಥೆಯಾಗಿದೆ. ಅವರು ನೆಟ್‌ವರ್ಕ್ ದೈತ್ಯ ಸಿಸ್ಕೊನಿಂದ ಕೌಶಲ್ಯ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *