ಮಹಾಲಕ್ಷ್ಮಿಯನ್ನು 50 ಪೀಸ್ ಮಾಡಿದ ರಾಕ್ಷಸನಿಗೆ ತೀವ್ರ ಹುಡುಕಾಟ

ಮಹಾಲಕ್ಷ್ಮಿಯನ್ನು 50 ಪೀಸ್ ಮಾಡಿದ ರಾಕ್ಷಸನಿಗೆ ತೀವ್ರ ಹುಡುಕಾಟ

ಬೆಂಗಳೂರು : ರಾಜಧಾನಿ ದೆಹಲಿಯಲ್ಲಿ 2022ರ ಮೇ18 ರಂದು ಶ್ರದ್ದಾ ವಾಕರ್ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಬಳಿಕ ಮೃತದೇಹವನ್ನು 35 ತುಂಡಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಟ್ಟು ನಂತರ ನಗರದ ಹಲವೆಡೆ ಮೃತ ದೇಹದ ತುಂಡುಗಳನ್ನು ಎಸೆದಿದ್ದ ಘಟನೆ ನಡೆದಿತ್ತು. ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

ಆದರೆ ಇದಕ್ಕೂ ಮೀರಿ ಇನ್ನಷ್ಟು ಕ್ರೂರವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊಲೆಯೊಂದು ನಡೆದಿದೆ. ಇಲ್ಲಿ ಮಹಾಲಕ್ಷ್ಮಿ ಎಂಬ ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಡಲಾಗಿದೆ. ಇನ್ನು ಕೂಡ ಕೊಲೆ ಆರೋಪಿ ಪತ್ತೆಯಾಗಿಲ್ಲ. ಮಹಿಳೆಯ ಕೊಲೆಯ ಸುತ್ತ ಹಲವಾರು ಅನುಮಾನಗಳು ವ್ಯಕ್ತವಾಗಿವೆ.

ವೈಯಾಲಿಕಾವಲ್ನಲ್ಲಿ ನಡೆದಿರೊ ಮಹಾಲಕ್ಷ್ಮಿ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿರೊ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಕೊಲೆ ರಹಸ್ಯ ಇನ್ನು ನಿಗೂಢವಾಗಿಯೇ ಉಳಿದಿದೆ. ಈ ಘಟನೆ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೃತಳ ತಾಯಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮಹಾಲಕ್ಷ್ಮಿಯನ್ನು 50 ಪೀಸ್ ಮಾಡಿದ ರಾಕ್ಷಸನಿಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ವಿಶೇಷ ತಂಡ ರಚಿಸಿದ್ದು, ಈಗಾಗಲೇ ಆರೋಪಿಯನ್ನ ಹುಡುಕಿಕೊಂಡು ಒಂದು ಟೀಮ್ ಪಶ್ಚಿಮ ಬಂಗಾಳಕ್ಕೆ ತೆರಳಿದೆ. ಕೊಲೆ ಮಾಡಿ ಹೊರ ರಾಜ್ಯಕ್ಕೆ ಆರೋಪಿ ಎಸ್ಕೇಪ್ ಆಗಿರೋ ಮಾಹಿತಿಯಿದ್ದು, 150ಕ್ಕೂ CCTV ದೃಶ್ಯಗಳ ಪರಿಶೀಲನೆ, ಕುಟುಂಬಸ್ಥರು, ಸ್ನೇಹಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಕ್ಕಪಕ್ಕದವರ ಹೇಳಿಕೆಗಳನ್ನು ಆಧರಿಸಿ ಆರೋಪಿಗೆ ಶೋಧ ನಡೆಯುತ್ತಿದ್ದು, ಮಹಾಲಕ್ಷ್ಮಿಯ ಸೋಷಿಯಲ್ ಮೀಡಿಯಾ ಪೋಸ್ಟ್ಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

Leave a Reply

Your email address will not be published. Required fields are marked *