ಕಾಂಗ್ರೆಸ್ ಕುರ್ಚಿ ಕದನಕ್ಕೆ ತೆರೆ?

ಕಾಂಗ್ರೆಸ್ ಕುರ್ಚಿ ಕದನಕ್ಕೆ ತೆರೆ?

ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಮಹತ್ವದ ಹೇಳಿಕೆ.

ನವದೆಹಲಿ : ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಲ ಶಾಸಕರು ಭೇಟಿ ಮಾಡಿದರು. ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕದಲ್ಲಿನ ಗೊಂದಲಗಳ ಕುರಿತು ಖರ್ಗೆ ಅವರ ಗಮನಕ್ಕೆ ತಂದಿರುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೊಂದಲಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮನವಿ ಮಾಡಿರುವುದಾಗಿ ಜಾರಕಿಹೊಳಿ ಹೇಳಿದ್ದಾರೆ.

ಆದಷ್ಟು ಬೇಗ ನಿರ್ಣಯ ಕೈಗೊಳ್ಳುವುದಾಗಿ ಮತ್ತು ಗೊಂದಲಗಳನ್ನು ತ್ವರಿತವಾಗಿ ಬಗೆಹರಿಸುವುದಾಗಿ ಖರ್ಗೆ ಭರವಸೆ ನೀಡಿದ್ದಾರೆ. ಈ ಕುರಿತು ಈಗಾಗಲೇ ಒಂದು ತೀರ್ಮಾನಕ್ಕೆ ಬರಲಾಗಿದೆ ಎಂದೂ ಖರ್ಗೆ ಮಾಹಿತಿ ನೀಡಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಪದೇ ಪದೇ ಅಧಿಕಾರದ ಗೊಂದಲಗಳು ಮತ್ತು ಹೇಳಿಕೆಗಳು ಬರದಂತೆ ಪೂರ್ಣವಿರಾಮ ಹಾಕಿ ಈ ಸಮಸ್ಯೆಗೆ ಶೀಘ್ರ ಇತ್ಯರ್ಥ ಸಿಗಬೇಕೆಂಬುದು ನಮ್ಮ ನಿರೀಕ್ಷೆ. ಯಾವುದೇ ವಿಳಂಬವಿಲ್ಲದೆ ಇದು ಬೇಗ ಮುಗಿದರೆ ಒಳ್ಳೆಯದು ಎಂದು ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *