ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿಗಳು ಮಾತನಾಡಬಾರದು ಎನ್ನುವುದು ಸರಿಯಲ್ಲ: ಪೇಜಾವರ ಶ್ರೀ

ದಾವಣಗೆರೆ : ಚಂದ್ರಶೇಖರ್ ಸ್ವಾಮೀಜಿ ಸಿಎಂ ಬದಲಾವಣೆ ಹೇಳಿಕೆ ವಿಚಾರವಾಗಿ ಪೇಜಾವರ ಶ್ರೀ ಬ್ಯಾಟ್ ಬೀಸಿದ್ದಾರೆ. ಇದರ ಬಗ್ಗೆ ಸ್ವಾಮೀಜಿಗಳು ಮಾತನಾಡಬಾರದು ಎನ್ನುವುದು ಸರಿಯಲ್ಲ ಎಂದು ಪೇಜಾವರ ಶ್ರೀ ಧ್ವನಿ‌ ಎತ್ತಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳು ಇದರ ಬಗ್ಗೆ ಮಾತನಾಡಬಾರದು ಎನ್ನುವುದು ಸರಿಯಲ್ಲ. ಅವರು ಕೂಡ ಮತ ಹಾಕಿದ್ದಾರೆ. ಹಾಗಾಗಿ ಮಾತನಾಡುವುದು ತಪ್ಪಲ್ಲ. ಸ್ವಾಮೀಜಿಗಳು ರಾಜಕೀಯ ಮಾತ್ನಾಡೋದು ನನ್ನ ಪ್ರಕಾರ ತಪ್ಪಲ್ಲ ಎಂದು ಪೇಜಾವರ ಶ್ರೀ ಒಕ್ಕಲಿಗ ಸಮಾಜದ ಚಂದ್ರಶೇಖರ್ ಸ್ವಾಮೀಜಿ ಪರ ಮಾತನಾಡಿದರು.

ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಮಾತನಾಡಿದ ಅವರು, ಹಿಂದೂಗಳು ದ್ವೇಷ ಸಾಧಿಸುತ್ತಾರೆ, ಹಿಂಸಾಪ್ರಿಯರು ಅಂತ ಹೇಳಿದ್ದಾರೆ. ಹಾಗಾದರೆ ನಮಗೆ ಕೋರ್ಟ್ ಕಚೇರಿಗಳು ಬೇಕಾಗಿರ್ಲಿಲ್ಲ. ನೇರವಾಗಿ ಹಿಂಸವಾದವನ್ನು ಮಾಡ್ತಿದ್ದರು. ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿ ಮಾತನಾಡಬಾರದು, ಇದು ಪ್ರಚೋದನಕಾರಿ ಭಾಷಣ, ಯಾರೋ ಬೇರೆಯವರು ಮಾತ್ನಾಡಿದರೆ ಕ್ರಮ ಕೈಗೊಳ್ಳುತ್ತಾರೆ. ಆದರೆ ಇದುವರೆಗೂ ಅವರ ವಿರುದ್ಧ ಕ್ರಮ ಆಗಿಲ್ಲ ಎಂದರು

Leave a Reply

Your email address will not be published. Required fields are marked *