A-1 ಆರೋಪಿ ಪವಿತ್ರಾಗೌಡಗೆ ಜೈಲಾ..ಬೇಲಾ..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಎ-1 ಆರೋಪಿ ಪವಿತ್ರಾಗೌಡ ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಬೆಂಗಳೂರಿನ ಸಿಟಿ ಸಿವಿಲ್ & ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ಆರೋಪಿ ಪವಿತ್ರಾಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ನೀಡಬೇಕಾ..? ಅಥವಾ ಮತ್ತೆ ಜೈಲು ಶಿಕ್ಷೆ ಮುಂದುವರೆಸಬೇಕಾ ಎಂದು ಕೋರ್ಟ್ ತೀರ್ಪು ನೀಡಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಂದಿದೆ ಎಂಬ ಆರೋಪವಿದೆ.

Leave a Reply

Your email address will not be published. Required fields are marked *