ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದೆ.

ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ಜೈಲೂಟ ತನಗೆ ಒಗ್ಗೂಡುತ್ತಿಲ್ಲ. ಹಾಗಾಗಿ ಮನೆ ಊಟ, ಹಾಸಿಗೆ, ದಿಂಬು, ಪುಸ್ತಕ ನೀಡುವಂತೆ ಕೋರಿ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ, ನಟ ದರ್ಶನ್ ಪರ ವಕೀಲರ ಹಾಗೂ ಪೊಲೀಸರ ಪರ ವಕೀಲರ ಸುದೀರ್ಘವಾದ ವಾದ ಆಲಿಸಿತು. ಬಳಿಕ ದರ್ಶನ್ ಅರ್ಜಿ ಕುರಿತ ತೀರ್ಪನ್ನು ಜುಲೈ 25ರಂದು ಪ್ರಕಟಿಸುವಾದಿಗಿ ಹೇಳಿ ತೀರ್ಪು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದೆ.

Leave a Reply

Your email address will not be published. Required fields are marked *