ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಕನಕಗಿರಿ ಪೊಲೀಸರು ಬಂಧಿಸಿದ್ದಾರೆ. | Arrest

ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಕನಕಗಿರಿ ಪೊಲೀಸರು ಬಂಧಿಸಿದ್ದಾರೆ. | Arrest

ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಕನಕಗಿರಿ ಪೊಲೀಸರು ಬಂಧಿಸಿದ್ದಾರೆ . ಹುಸೇನಿ ಬಂಧಿತ ಯುವಕ. ಸದ್ಯ ಈತನ  ವಿರುದ್ಧ ಗುನ್ನೆ ನಂಬರ್ 162/2025, ಕಲಂ 353(1)ಸಿ, 353(2) ಬಿಎನ್ಎಸ್ 2003 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ಯುವಕ ಹುಸೇನಿ, ಶಾಸಕ ಯತ್ನಾಳ್​ ವಿರುದ್ದ ಅವಹೇಳಕಾರಿ ಮಾತನಾಡಿ ವಿಡಿಯೋ ಹರಿಬಿಟ್ಟಿದ್ದ. ವಿಡಿಯೋ ವೈರಲ್ ಆದ ಬೆನಲ್ಲೇ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಅಷ್ಟೇ ಅಲ್ಲದೆ ಯತ್ನಾಳ್​​ ಬೆಂಬಲಿಗರು ಆಕ್ರೋಶ ಹೊರಹಾಕಿದ್ದರು.

ಹುಸೇನಿ ಹೇಳಿದ್ದೇನು?

ಶಾಸಕ​ ಯತ್ನಾಳ್​ ಅಧಿವೇಶನದಲ್ಲಿ ಆಜಾನ್​​ ಕುರಿತಾಗಿ ಪ್ರಸ್ತಾಪಿಸಿದ್ದ ವಿಚಾರವಾಗಿ ವಿಡಿಯೋ ಹರಿಬಿಟ್ಟಿದ್ದ ಹುಸೇನಿ, ‘ನೀನು ಬೂಟು ನೆಕ್ಕಿದ ವಂಶಸ್ಥ’ ಎಂದು ನಾಲಿಗೆ ಹರಿಬಿಟ್ಟಿದ್ದ. ಈ ವಿಡಿಯೋ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಮುಸಲಾಪುರ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ಯತ್ನಾಳ್​​ ಬೆಂಬಲಿಗರು ಕ್ರಮಕ್ಕೆ ಒತ್ತಾಯಿಸಿದ್ದರು. ಬಳಿಕ ಹುಸೇನಿ ಕ್ಷಮೆ ಕೂಡ ಕೇಳಿದ್ದಾನೆ.

ಯತ್ನಾಳ್​ ವಿರುದ್ದ ಕೊಪ್ಪಳ ನಗರ ಠಾಣೆಯಲ್ಲಿ ಕೇಸ್ ದಾಖಲು

ಇನ್ನು ಇತ್ತೀಚೆಗೆ ಕೊಪ್ಪಳದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್​ ಆಡಿದ್ದ ಮಾತು ರಾಜ್ಯದಲ್ಲಿ ಕಿಡಿ ಹೊತ್ತಿಸಿತ್ತು. ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು ಎಂದು ಹೇಳಿದ್ದರು.

ಹಿಂದೂ ಯುವಕ ಗವಿಸಿದ್ದಪ್ಪ ನಾಯಕ್ ನಿವಾಸಕ್ಕೆ ಭೇಟಿ ನೀಡಿ ಆತನ ಕುಟುಂಬಕ್ಕೆ ಸಾಂತ್ವನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನ ಮುಸ್ಲಿಂ ಸಮುದಾಯ ತೀವ್ರವಾಗಿ ಖಂಡಿಸಿತ್ತು. ಯತ್ನಾಳ್​ ಕಾರ್​ಗೆ ವಿಜಯಪುರದಲ್ಲಿ ಮುತ್ತಿಗೆ ಕೂಡ ಹಾಕಲಾಗಿತ್ತು.

ಘಟನೆ ನಡೆದು ಹತ್ತು ದಿನಗಳ ಬಳಿಕ ಕೊಪ್ಪಳ ನಗರ ಠಾಣೆಯಲ್ಲಿ ಯತ್ನಾಳ್​ ವಿರುದ್ದ ದೂರು ಕೂಡ ದಾಖಲಾಗಿತ್ತು. ಮುಸ್ಲಿಂ ಸಮುದಾಯದ ಮುಖಂಡ ಅಬ್ದುಲ್ ರಜಾಕ್ ದೂರು ನೀಡಿದ್ದರು. ಯತ್ನಾಳ್​ ರಾಜ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಅವರ ಮೇಲೆ ಕ್ರಮ ಆಗಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *