ಬೆಂಗಳೂರು: ಲಗ್ಗೆರೆ ಬಳಿಯ ಕೆಂಪೇಗೌಡ ವೃತ್ತದಲ್ಲಿ ಬುಧವಾರ ರಾತ್ರಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್, ರಸ್ತೆ ದಾಟುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಹರಿದಿದೆ. ಅಪಘಾತದ ಕಾರಣವನ್ನು ತಿಳಿಯಲು ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
![](http://pragatitv.in/wp-content/uploads/2022/09/JEENI_ADD_WEB-1024x576.jpg)
ಮೃತರನ್ನು ಸುರೇಶ್ ಮತ್ತು ಕುಂಟ್ಯಪ್ಪ ಎಂದು ಗುರುತಿಸಲಾಗಿದ್ದು, ಇಬ್ಬರೂ 25-30 ವರ್ಷ ವಯಸ್ಸಿನವರಾಗಿದ್ದಾರೆ. ಪ್ರಾಥಮಿಕವಾಗಿ ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ ಆದರೆ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ.
ಘಟನಾ ಸ್ಥಳಕ್ಕೆ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ (ಸಂಚಾರ) ಸಚಿನ್ ಘೋರ್ಪಡೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಗುರುವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Pragati TV Social Connect for more latest u