Pakistani mediaಳಲ್ಲಿ ಕರ್ನಾಟಕದ ನಾಯಕರು : ಮೊನ್ನೆ CM ಇಂದು Parameshwara

Pakistani mediaಳಲ್ಲಿ ಕರ್ನಾಟಕದ ನಾಯಕರು : ಮೊನ್ನೆ CM ಇಂದು Parameshwara

ಅಂತರಾಷ್ಟ್ರೀಯ : ಪಾಕ್ ಜೊತೆ ಯುದ್ಧ ಬೇಕಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಸಿದ್ದರಾಮಯ್ಯ ಸಾರಿದ್ದ ‘ಶಾಂತಿಯ ಸಂದೇಶ’ ಪಾಕ್ನ ಜನಪ್ರಿಯ ಟಿವಿ ಚಾನೆಲ್ಗಳ ನ್ಯೂಸ್ಗಳಲ್ಲಿ ಪ್ರಸಾರ ಮಾಡಲಾಗಿತ್ತು. ಇದೀಗ ಕರ್ನಾಟಕದ ಗೃಹಸಚಿವ ಡಾ. ಜಿ. ಪರಮೇಶ್ವರ್ ಸಹ ಪಾಕ್ ಮಾದ್ಯಮದಲ್ಲಿ ಕಾಣಿಸಿಕೊಂಡಿದ್ದಾರೆ

ಪರಮೇಶ್ವರ್ ಹೇಳಿಕೆ ಉಲ್ಲೇಖಿಸಿದ ಡಾನ್ ಪತ್ರಿಕೆ

ಪಾಕಿಸ್ತಾನದ ಜನಪ್ರಿಯ ಪತ್ರಿಕೆ ಡಾನ್ ತನ್ನ ವರದಿಯಲ್ಲಿ ಕರ್ನಾಟಕದ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಸುದ್ದಿ ಪ್ರಕಟಿಸಿದೆ. ಮಂಗಳೂರಿನಲ್ಲಿ ನಡೆದ ವ್ಯಕ್ತಿಯೋರ್ವನ ಹತ್ಯೆಗೆ ಸಂಬಂಧಿಸಿದಂತೆ ಗೃಹಸಚಿವ ಪರಮೇಶ್ವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಆ ಹೇಳಿಕೆಯನ್ನು ಡಾನ್ ಪತ್ರಿಕೆ ತನ್ನ ಸುದ್ದಿಯಲ್ಲಿ ಉಲ್ಲೇಖಿಸಿದೆ

ಏಪ್ರಿಲ್ 27ರಂದು ಸಂಜೆ ಸುಮಾರು 5:30 ಸುಮಾರಿಗೆ ಮಂಗಳೂರಿನ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದರು. ಮೃತದೇಹದ ಮರಣೋತ್ತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತನ ಬೆನ್ನಿಗೆ ಬಲವಾದ ಹೊಡೆತ ಬಿದ್ದಿದೆ. ಗಂಭೀರ ಗಾಯಗೊಂಡ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿದೆ ಎಂದು ವರದಿಯಾಗಿತ್ತು.

ಮೃತನಾದ ವ್ಯಕ್ತಿಯ ಬಗ್ಗೆ ಪೊಲೀಸರಿಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಉತ್ತರ ಭಾರತ ಅಥವಾ ಕೇರಳ ಮೂಲದವನು ಆಗಿರುವ ಬಗ್ಗೆ ಶಂಕೆ ಇದೆ. ಪಾನಮತ್ತನಾಗಿ ಪಾಕಿಸ್ತಾನಕ್ಕೆ ಜೈ ಕಾರ ಕೂಗಿರೋದಕ್ಕೆ ಗುಂಪು ಆತನ ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ಸುದ್ದಿ ಹರಿದಾಡುತ್ತಿದೆ ಎನ್ನಲಾಗಿದೆ.

ಗೃಹಸಚಿವ ಪರಮೇಶ್ವರ್ ಹೇಳಿದ್ದೇನು?

ಈ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್, ಆತನ ಗುರುತು ಪತ್ತೆಯಾಗಿಲ್ಲ. ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದ ಅಂತ ಹೇಳಲಾಗಿದೆ ಅಂತ ಪ್ರತಿಕ್ರಿಯಿಸಿದ್ದರು.

ಪರಮೇಶ್ವರ್ ಪ್ರತಿಕ್ರಿಯೆ ಬಗ್ಗೆ ಡಾನ್ ಪತ್ರಿಕೆ ವರದಿ

ಈ ಬಗ್ಗೆ ಡಾನ್ ಪತ್ರಿಕೆ ವರದಿ ಮಾಡಿದೆ. ಕಳೆದ ವಾರ ತಮ್ಮ ರಾಜ್ಯದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿದ್ದಕ್ಕಾಗಿ ಅಪರಿಚಿತ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿದೆ ಎಂದು ಕರ್ನಾಟಕ ಆಂತರಿಕ ಸಚಿವ ಜಿ ಪರಮೇಶ್ವರ ಮಂಗಳವಾರ ದೃಢಪಡಿಸಿದ್ದಾರೆ ಅಂತ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.

ಸುಮಾರು 10 ರಿಂದ 12 ಜನರನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪರಮೇಶ್ವರ್ ಹೇಳಿದರು. ನಾವು ಇದನ್ನು ಖಂಡಿತವಾಗಿಯೂ ಗಂಭೀರವಾಗಿ ಪರಿಗಣಿಸುತ್ತೇವೆ. ಏಕೆಂದರೆ ಇಂತಹ ಘಟನೆಗಳು ಎಲ್ಲಿಯೂ ಸಂಭವಿಸಬಾರದು. ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದರೆ, ಜನರು ಕಾನೂನನ್ನು ಕೈಗೆತ್ತಿಕೊಳ್ಳುವ ಬದಲು ಪೊಲೀಸರಿಗೆ ಒಪ್ಪಿಸಬೇಕಿತ್ತು ಎಂದು ಅವರು ಹೇಳಿದರು ಅಂತ ಡಾನ್ ಪತ್ರಿಕೆ ವರದಿ ಮಾಡಿದೆ.

Leave a Reply

Your email address will not be published. Required fields are marked *