Karnataka Rain Update  || ಮಳೆಯ ಅಬ್ಬರ ಕಡಿಮೆಯಾದರೂ 4 ಜಿಲ್ಲೆಗಳಲ್ಲಿ ಎಚ್ಚರಿಕೆ..!

Karnataka Rain Update  || ಮಳೆಯ ಅಬ್ಬರ ಕಡಿಮೆಯಾದರೂ 4 ಜಿಲ್ಲೆಗಳಲ್ಲಿ ಎಚ್ಚರಿಕೆ..!

ಬೆಂಗಳೂರು: ರಾಜ್ಯದೆಲ್ಲೆಡೆ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಬುಧವಾರದಿಂದ ಕೊಂಚ ಇಳಿಮುಖವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಾತಾವರಣ ಹೇಗಿರಲಿದೆ ಎಂಬ ಬಗ್ಗೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಹೀಗಿದೆ.

ಈ ಜಿಲ್ಲೆಗಳಲ್ಲಿ ಮಳೆ : ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 26ರವರೆಗೆ ಒಣಹವೆ ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಕೆಲ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ನಂತರ ಆಗಸ್ಟ್ 27ರಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಯೆಲ್ಲೋ ಅಲರ್ಟ್ : ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಬೀದರ್, ಧಾರವಾಡ, ಗದಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಅಲ್ಪ ಪ್ರಮಾಣದ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆ ವರದಿ? : ಕಾರವಾರ, ಜೋಯಿಡಾ, ಹಳಿಯಾಳ, ಗೇರುಸೊಪ್ಪ, ಕ್ಯಾಸಲ್ರಾಕ್, ಯಲ್ಲಾಪುರ, ಆಗುಂಬೆ, ಲೋಂಡಾ, ಮಂಕಿ, ಖಾನಾಪುರ, ನಿಪ್ಪಾಣಿ, ಬೆಳಗಾವಿ, ಕಿತ್ತೂರು, ಕಮ್ಮರಡಿ, ಕಿರವತ್ತಿ, ಹೊನ್ನಾವರ, ಹುಬ್ಬಳ್ಳಿ, ಚಿಕ್ಕೋಡಿ, ಹುಕ್ಕೇರಿ, ಚಿತ್ತಾಪುರ, ಧರ್ಮಸ್ಥಳ, ಧಾರವಾಡ, ಸಂಕೇಶ್ವರ, ಬೈಲಹೊಂಗಲ, ಲೋಕಾಪುರ, ಆಳಂದ, ಕಲಬುರಗಿ, ಅಣ್ಣಿಗೆರೆ, ಮುದ್ದೇಬಿಹಾಳ, ಸೇಡಂ, ಕಳಸ ಹಾಗೂ ಕೊಪ್ಪದಲ್ಲಿ ಬುಧವಾರ ಮಳೆಯಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *