ಮನೆಯ ಮುಂಭಾಗದಲ್ಲೇ ವ್ಯಕ್ತಿ ಕೊ*..!

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವ್ಯಕ್ತಿಯನ್ನು ಮನಸೋಯಿಚ್ಚೆ ಕೊಚ್ಚಿ ಕೊಲೆ ಮಾಡಲಾಗಿದ್ದು ಜನ ಆತಂಕಗೊಂಡಿದ್ದಾರೆ.

ಬೆಂಗಳೂರಿನ ಪುಲಕೇಶಿನಗರದಲ್ಲಿನ ಕಾಕ್ಸ್ಟೌನ್ ಬಳಿ ಈ ಕೊಲೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಕೆಲಸ ಮುಗಿಸಿ ವಾಪಸ್ ಬರುವಾಗ 35 ವರ್ಷದ ಅಜೀತ್ ಎಂಬಾತನ ಮೇಲೆ ಅಟ್ಯಾಕ್ ಮಾಡಲಾಗಿದೆ.

ಏಕಾಏಕಿ ಬಂದ ಹಂತಕರು ಅಜೀತ್ ಎಂಬಾತನ ಮೇಲೆ ಹಲ್ಲೆ ಮಾಡಿ ಮನಬಂದಂತೆ ಕೊಚ್ಚಿ ಹಾಕಿದ್ದಾರೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಜೀತ್ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಪ್ರಾಣಪಕ್ಷಿ ಹಾರಿ ಹೋಗಿದೆ. ಕೊಲೆಯಾದ ಸ್ಥಳದಲ್ಲಿ ಹರಿದ ನೆತ್ತರು ಕಂಡು ಜನ ಭಯಭೀತರಾಗಿದ್ದಾರೆ.

ಅಜೀತ್ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಹಣಕಾಸಿನ ವಿಚಾರದಲ್ಲಿ ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಬಡ್ಡಿ ವಿಚಾರದಲ್ಲಿ ಸಾಲವನ್ನು ಪಡೆದಿದ್ದರು. ಮನೆ ಎದುರೇ ನಡೆದ ಹತ್ಯೆ ಜನ ಬೆಚ್ಚಿಬಿದ್ದಿದ್ದಾರೆ.

Leave a Reply

Your email address will not be published. Required fields are marked *