ಬೆಂಗಳೂರಿನಲ್ಲಿ ಕೊಹ್ಲಿ ಅಭಿಮಾನಿಗೆ ಥಳಿತ – ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೈದಾನ ಪ್ರವೇಶಿಸಿದ್ದ ಯುವಕನಿಗೆ ಥಳಿಸಿದ್ದನ್ನು ಪ್ರಶ್ನಿಸಿ  ಸಾಮಾಜಿಕ ಹೋರಾಟಗಾರ ಮರಿಲಿಂಗಗೌಡಮಾಲಿ ಪಾಟೀಲ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಮಾನವೀಯತೆ ಮರೆತು ಲಕ್ಷಾಂತರ ಜನರ ಮುಂದೆ ಯುವಕನಿಗೆ ಥಳಿಸಿದ್ದಾರೆ‌‌. ಹಲ್ಲೆ ಮಾಡಲು ಇವರಿಗೆ ಏನು ಹಕ್ಕಿದೆ? ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ ಹೊರತು ಹಲ್ಲೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ

ಮಾರ್ಚ್‌ 25 ರಂದು ಪಂಜಾಬ್ ಕಿಂಗ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಧ್ಯೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿತ್ತು. ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್ ಬರುತ್ತಿದ್ದಂತೆ ಅಭಿಮಾನಿಯೊಬ್ಬ ಹೈ ಸೆಕ್ಯೂರಿಟಿ ಮಧ್ಯೆಯೂ ಕ್ರೀಸ್ ಒಳಗಡೆ ನುಗ್ಗಿ ಕೊಹ್ಲಿ ಕಾಲು ಹಿಡಿದು ಹುಚ್ಚಾಟ ನಡೆಸಿದ್ದ.  

Leave a Reply

Your email address will not be published. Required fields are marked *