ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಲ್ಲಿ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ.

ಹುದ್ದೆ ವಿವರ: ಒಟ್ಟು 13 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಹುದ್ದೆ ವಿವರಗಳು ಕೆಳಗಿನಂತಿದೆ.
ಜಿಲ್ಲಾ ಮ್ಯಾನೇಜರ್
ತಾಲೂಕು ಪ್ರೊಗ್ರಾಂ ಮ್ಯಾನೇಜರ್
ಬ್ಲಾಕ್ ಮ್ಯಾನೇಜರ್
ಕ್ಲಸ್ಟರ್ ಸೂಪರ್ವೈಸರ್- ಸ್ಕಿಲ್
ಕ್ಲಸ್ಟರ್ ಸೂಪರ್ವೈಸರ್
ತಾಲೂಕ್ ಪ್ರೋಗ್ರಾಂ ಮ್ಯಾನೇಜರ್ – ಎಸ್ವಿಇಪಿ
ಆಫೀಸ್ ಅಸಿಸ್ಟಂಟ್
ಡಿಸ್ಟ್ರಿಕ್ಟ್ ಮ್ಯಾನೇಜರ್
ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಎಂಬಿಎ, ಎಂಎಸ್ಡಬ್ಲ್ಯೂ, ಸ್ನಾತಕೋತ್ತರ ಪದವಿ, ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆ: ಕರ್ನಾಟಕ ಸರ್ಕಾರದ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಧಿಕೃತ ಜಾಲತಾಣದ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಈ ಹುದ್ದೆಗೆ ಮೇ 18 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಮೇ 30 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ksrlps.karnataka.gov.in ಭೇಟಿ ನೀಡಬಹುದಾಗಿದೆ.