ಕುಂದಾಪ್ರ ಕನ್ನಡ ಹಬ್ಬ : ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ

ಬೆಂಗಳೂರು: ಅರಮನೆ ಮೈದಾನದಲ್ಲಿ ನಗರದ ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ವು 17 ಮತ್ತು 18ರಂದು ‘ಕುಂದಾಪ್ರ ಕನ್ನಡ ಹಬ್ಬ’ ಹಮ್ಮಿಕೊಂಡಿದೆ. 17ರ ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಮೊದಲ ದಿನದ ಕಾರ್ಯಕ್ರಮದಲ್ಲಿ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್ನ ಕೃಷ್ಣಮೂರ್ತಿ ಮಂಜ, ಲೈಫ್ಲೈನ್ ಫೀಡ್ಸ್ ಪ್ರೖೆ.ಲಿ. ಎಂಡಿ ಕಿಶೋರ್ಕುಮಾರ್ ಹೆಗ್ಡೆ ಪಾಲ್ಗೊಳ್ಳುವರು. ಭಾನುವಾರದ ಸಮಾರಂಭದಲ್ಲಿ ‘ಪದ್ಮಶ್ರೀ’ ಪುರಸ್ಕೃತ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಅವರನ್ನು ಸನ್ಮಾನಿಸಲಾಗುವುದು. ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಗ್ರೂಪ್ನ ಉಪೇಂದ್ರ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಸೌತ್ ಫೀಲ್ಡ್ ಪೇಂಟ್ಸ್ ಪ್ರೖೆ.ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್ನ ಗೋವಿಂದಬಾಬು ಪೂಜಾರಿ ಭಾಗಿಯಾಗಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಬ್ಬದ ಎರಡು ದಿನಗಳಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ರ್ಪಾಂಗ್ಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಅನುಕೂಲದ ದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಮೂಲಕ ಆಗಮಿಸುವುದು ಉತ್ತಮ. ಶನಿವಾರ ಮಧ್ಯಾಹ್ನ 2ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ ಎಂದು ದೀಪಕ್ ಶೆಟ್ಟಿ ತಿಳಿಸಿದರು. ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ,ಪದಾಧಿಕಾರಿಗಳಾದ ವಿಜಯ್ ಶೆಟ್ಟಿ ಹಾಲಾಡಿ, ಅಜಿತ್ ಶೆಟ್ಟಿ ಉಳ್ತೂರು, ವಿಜಯ್ ಶೆಟ್ಟಿ, ಚಂದ್ರಶೇಖರ್ ಉಪಸ್ಥಿತರಿದ್ದರು.

ಶನಿವಾರದ ಕಾರ್ಯಕ್ರಮಗಳು ಮಧ್ಯಾಹ್ನ 3: ದಿಬ್ಬಣ- ನಗರದ ವಿವಿಧ ಭಾಗಗಳ ಜನರ ಪುರ ಮೆರವಣಿಗೆ • ಸಂಜೆ 4: ನಾಕ್ ಘನಾ ಸುರ್ಲ್- ಮಂಗಳೂರಿನ ಜರ್ನಿ ಥೇಟರ್ ತಂಡದಿಂದ ಜಾನಪದ, ರಂಗ ಹಾಗೂ ಕುಂದಾಪ್ರ ಕನ್ನಡ ಗೀತಗಾಯನ • ಸಂಜೆ • 6.30: ಜೋಡಾಟ- ಕರಾವಳಿ ಜಿಲ್ಲೆಗಳ ಸುಪ್ರಸಿದ್ಧ ಕಲಾವಿದರ ಮೇಳೈಸುವಿಕೆ.

ಭಾನುವಾರ ಏನೇನು?

ಬೆಳಗ್ಗೆ 10: ಬಯಲಾಟ- ಗ್ರಾಮೀಣ ಉತ್ಸವ • ಬೆಳಗ್ಗೆ 10: ತಾರೆಯರ ಜೊತೆ ಮಾತುಕತೆ, ಕವಿತೆ • ಬೆಳಗ್ಗೆ 11: ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ‘ಡಾನ್ಸ್ ಕುಂದಾಪ್ರ ಡಾನ್ಸ್’ • ಬೆಳಗ್ಗೆ 11.15: ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ • ಮಧ್ಯಾಹ್ನ 12: ಮನು ಹಂದಾಡಿ ಅವರಿಂದ ‘ಹಂದಾಡ್ತಾ ನೆಗ್ಯಾಡಿ’ ಹಾಸ್ಯ ಕಾರ್ಯಕ್ರಮ • ಮಧ್ಯಾಹ್ನ 1.30: ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ‘ಪೆಟ್ ಒಂದೇ, ಸ್ವರ ಬೇರೆ’ • ಮಧ್ಯಾಹ್ನ 2.30: ಮಂರ್ದತಿ ಶ್ರೀದುರ್ಗಾಪರಮೇಶ್ವರಿಯ ನೃತ್ಯಗಾಥೆ ‘ಮಂದಾರ್ತಿ ಮಾದೇವಿ’ • ಸಂಜೆ 4.30: ರಥೋತ್ಸವ • ರಾತ್ರಿ 7.30: ‘ರವಿ ಬಸ್ರೂರ್ ನೈಟ್ಸ್’ವಿಶೇಷ ಸಂಗೀತ ಸಂಜೆ.

ಹಬ್ಬಕ್ಕೆ ತಾರಾ ಮೆರುಗು

ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ನಟರಾದ ಗಣೇಶ್, ಶಿವರಾಜ್ಕುಮಾರ್, ಉಪೇಂದ್ರ ಕುಂದಾಪ್ರ ಕನ್ನಡ ಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ವಿಶೇಷ ಆಕರ್ಷಣೆ

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜೋಡಾಟ ಹಮ್ಮಿಕೊಳ್ಳಲಾಗಿದೆ. ‘ಹೊಟ್ಟಿ ಕಂಡದ್ದ್ ನಾವೇ ಸೈ’ ಎಂಬ ಹೆಸರಿನಲ್ಲಿ ಕರಾವಳಿ ತಿನಿಸುಗಳ ಖಾದ್ಯಮೇಳ, ವಸ್ತು, ಒಡವೆ, ವಸ್ತ್ರ ಪ್ರದರ್ಶನ ಮತ್ತು ಮಾರಾಟದ ‘ಕುಂದಾಪ್ರ ಸಂತಿ’ ಇರಲಿವೆ.

Leave a Reply

Your email address will not be published. Required fields are marked *