ಕುಣಿಗಲ್ : ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸಾಂಕ್ರಾಮಿಕ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಸೌಲಭ್ಯಗಳನ್ನು ಸರಿಯಾಗಿ ಒದಗಿಸುತ್ತಿಲ್ಲ ಎಂದು ಕುಣಿಗಲ್ ಶಾಸಕ. ಡಾ ರಂಗನಾಥ್ ಅವರು ಉಪವಾಸ ಸತ್ಯಾಗ್ರಹವನ್ನು ಮಾಡಿದ್ದಾರೆ.
ಪ್ರತಿನಿತ್ಯ ನೂರಾರು ಸೋಂಕಿತರು ತಾಲೂಕು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ, ಆದರೆ ಇಲ್ಲಿ 60 ಹಾಸಿಗೆಗಳ ಆಕ್ಸಿಜನ್ ವ್ಯವಸ್ಥೆ ಮಾತ್ರ ಇದೆ. ಇದರಲ್ಲಿ ಅರ್ಧಭಾಗ ರಾಜಕಾರಣಿಗಳ ಹಿಂಬಾಲಕರ ಪಾಲಾಗಿವೆ, ಇದೀಗ ಬಡವರು ಏನು ಮಾಡಬೇಕು ಅವರ ಪ್ರತಿನಿಧಿಯಾಗಿ ಪ್ರತಿಭಟನೆಯನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ತಾಲೂಕಿನಲ್ಲಿ ಇಂತಹ ಸಮಸ್ಯೆಗಳನ್ನು ಬಗೆಹರಿಸಿ ಕೊಡಿ ಎಂದು ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ, ತಾಲೂಕಿನಲ್ಲಿ ಬೆಡ್, ಆಕ್ಸಿಜನ್ ಮತ್ತು ವೈದ್ಯಕೀಯ ಸೌಲಭ್ಯಗಳ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು ಎಂದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
Pragati TV Social Connect for more latest u