ಕರ್ನೂಲ್ ಬಸ್ ದುರಂತ: 20 ಸಜೀವ ದಹನ, ಬೈಕ್ ಕಿಡಿಯೇ ಬೆಂ*ಕಿ ಅವಘಡಕ್ಕೆ ಕಾರಣ.

ಕರ್ನೂಲ್ ಬಸ್ ದುರಂತ: 20 ಸಜೀವ ದಹನ, ಬೈಕ್ ಕಿಡಿಯೇ ಬೆಂ*ಕಿ ಅವಘಡಕ್ಕೆ ಕಾರಣ.

ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್​​ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್​​​ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಅವರು ಈ ಬೆಂಕಿ ಅಪಘಾತದ ಬಗ್ಗೆ ನಿಖರವಾದ ಮಾಹಿತಿ ನೀಡಿದ್ದಾರೆ.

ಇಂದು ಬೆಂಕಿ ಅವಘಡಕ್ಕೆ ತುತ್ತಾದ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದವರ ಅಧಿಕೃತ ಮಾಹಿತಿ ಲಭ್ಯವಾಗಿದೆ. ಒಟ್ಟು ಪ್ರಯಾಣಿಕರ ಸಂಖ್ಯೆ 46. ಅವರಲ್ಲಿ 39 ಜನ ಹಿರಿಯ ಪ್ರಯಾಣಿಕರು, 4 ಜನ ಮಕ್ಕಳು, 2 ಚಾಲಕರು‌ ಸೇರಿ 45 ಜನರು ಬಸ್​​ನಲ್ಲಿದ್ದರು. ಆದರೆ, ಮಾರ್ಗ ಮಧ್ಯೆ ಓರ್ವ ಅಪರಿಚಿತ ಪ್ರಯಾಣಿಕ ಬಸ್ ಹತ್ತಿಕೊಂಡಿದ್ದ. ಹೀಗಾಗಿ, ಬಸ್​​ನಲ್ಲಿದ್ದ 45 ಜನರ ಗುರುತು ಪತ್ತೆಯಾಗಿದೆ. ಆದರೆ, ಉಳಿದ ಓರ್ವನ ಮಾಹಿತಿ ಸಿಕ್ಕಿಲ್ಲ. ಈ ಪೈಕಿ 18 ಹಿರಿಯ ಪ್ರಯಾಣಿಕರು, 2 ಮಕ್ಕಳು ಸೇರಿ 20 ಜನ ಸಾವನ್ನಪ್ಪಿದ್ದಾರೆ.

ಬೆಂಕಿ ಅವಘಡಕ್ಕೆ ಕಾರಣ:

ಹೈದರಾಬಾದ್​​ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ. ಬೈಕ್​ಗೆ ಬಸ್​ ಡಿಕ್ಕಿ ಹೊಡೆದ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬೈಕ್​ ಸವಾರ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೆಲವರು ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿದ್ದಾರೆ. ಹೀಗಾಗಿ ಡಿಎನ್​ಎ ಪರೀಕ್ಷೆ ನಡೆಸಿ ಮೃಹದೇಹ ಹಸ್ತಾಂತರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಆಂಧ್ರದ ಗೃಹ ಸಚಿವೆ ಅನಿತಾ ಮಾಹಿತಿ ನೀಡಿದ್ದಾರೆ.

ವಿಧಿವಿಜ್ಞಾನ ಪ್ರಯೋಗಾಲಯದ 16 ತಂಡದಿಂದ ಮಾದರಿ ಸಂಗ್ರಹಿಸಲಾಗುತ್ತಿದೆ. ಸದ್ಯ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಸ್ ದುರಂತದ ಬಗ್ಗೆ ತನಿಖೆಗೆ 4 ವಿಶೇಷ ತಂಡ ರಚಿಸಲಾಗುವುದು ಎಂದು ಕರ್ನೂಲ್​​​ನಲ್ಲಿ ಆಂಧ್ರದ ಗೃಹ ಸಚಿವೆ ವಂಗಲಪುಡಿ ಅನಿತಾ ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *