ಬೆಂಗಳೂರಿನಲ್ಲಿ ಚಿರತೆ ಭೀತಿ: ಮನೆಬಿಟ್ಟು ಹೊರಬರಲಾರಾದ ನಿವಾಸಿಗಳು.

ಬೆಂಗಳೂರಿನಲ್ಲಿ ಚಿರತೆ ಭೀತಿ: ಮನೆಬಿಟ್ಟು ಹೊರಬರಲಾರಾದ ನಿವಾಸಿಗಳು.

ಬೆಂಗಳೂರು: ಸುಮಾರು ದಿನಗಳ ಬಳಿಕ ಸಿಲಿಕಾನ್​​ ಸಿಟಿ ಜನರಿಗೆ ಅದೊಂದು ಭಯ ಶುರುವಾಗಿದೆ. ಅದೇ ಚಿರತೆ  ಭಯ. ಸೋಮವಾರದಂದು ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಬಳಿಯ ಕೆಂಪೇಗೌಡ ಲೇಔಟ್​ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಸ್ಥಳೀಯರ ಮೊಬೈಲ್​​ನಲ್ಲಿ ವಿಡಿಯೋ ಸೆರೆಯಾಗಿದೆ. ಜೊತೆಗೆ ಸಿಸಿಟಿವಿಯಲ್ಲೂ ಚಿರತೆ ಓಡಾಟ ಪತ್ತೆಯಾಗಿದೆ. ಸದ್ಯ ಸ್ಥಳೀಯರು ಆತಂಕಗೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಲೇಔಟ್ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿತ್ತು. ಚಿರತೆ ಓಡಾಟದ ಹಿನ್ನೆಲೆ ನಾಗರಿಕರು ಕಂಗೆಟ್ಟಿದ್ದಾರೆ. ಗೇರಿ ಹೋಬಳಿಯ ಹೊಸ ಪಾಳ್ಯ, ಬೆಟ್ಟನ ಪಾಳ್ಯ, ಹುಣಸೆ ಮರದ ಪಾಳ್ಯ, ಭೀಮನ ಕುಪ್ಪೆ ಮತ್ತು ಚಲ್ಲಘಟ್ಟ ಗ್ರಾಮಗಳ ಜನರಲ್ಲಿ ಆತಂಕ ಶುರುವಾಗಿದೆ.

ಹತ್ತಾರು ಕುರಿ, ಮೇಕೆಗಳು ಚಿರತೆಗೆ ಆಹಾರವಾಗುತ್ತಿದ್ದು, ಹಸು, ಕರು, ದನಗಳ ಮೇಲೆಯೂ ನಿರಂತರ ದಾಳಿ ಮಾಡುತ್ತಿದೆ. ಹೀಗಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ಹೋಗುವುದಿರಲಿ, ಮನೆಯಿಂದ ಕೂಡ ಹೊರಬರಲು ಗ್ರಾಮಸ್ಥರ ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದು, ನಿರೀಕ್ಷಿತ ರೀತಿಯಲ್ಲಿ ಸ್ಪಂದನೆ ಸಿಗದ ಹಿನ್ನೆಲೆ ಅಸಮಾಧಾನಗೊಂಡಿದ್ದಾರೆ. ನಾಲ್ಕೈದು ಗ್ರಾಮಗಳ ಜನರಿಗೆ ಚಿರತೆ ಪ್ರಾಣಭಯ ಇನ್ನೂ ದೂರವಾಗಿಲ್ಲ. ಸದ್ಯ ಗುಂಪು ಗುಂಪಾಗಿ ಜನರು ಓಡಾಡುವಂತಾಗಿದೆ.

ಜಮೀನಿಗೆ ನೀರು ಹಾಯಿಸಲು ಹೋಗಿದ್ದ ಸಹೋದರರ ಮೇಲೆ ಚಿರತೆ ಅಟ್ಯಾಕ್

ಇನ್ನು ಇತ್ತೀಚೆಗೆ ಹಾವೇರಿ ಜಿಲ್ಲೆಯಲ್ಲಿ ಸಹೋದರರಿಬ್ಬರು ರಾತ್ರಿ ಊಟ ಮುಗಿಸಿ, ತಮ್ಮ ಜಮೀನಿಗೆ ನೀರು ಹಾಯಿಸಲು ಹೋಗಿದ್ದರು. ಕೈಯಲ್ಲಿ ಟಾರ್ಚ್ ಹಿಡಿದು ತಮ್ಮ ಜಮೀನಿಗೆ ತೆರಳಿದ ಕೆಲವೇ ಹೊತ್ತಿನಲ್ಲಿ ಅಣ್ಣ-ತಮ್ಮನ ಮೇಲೆ ಹೊಂಚುಹಾಕಿ ಕಾಯ್ದು ಕುಳಿತಿದ್ದ ಚಿರತೆ ಅಟ್ಯಾಕ್ ಮಾಡಿತ್ತು. ತಮ್ಮ ಸಾವನಪ್ಪಿದರೆ, ಅಣ್ಣ ಬದುಕುಳಿದಿದ್ದ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ‌ ಮಾಡಿತ್ತು. ಘಟನೆಯಲ್ಲಿ ಬೀರೇಶ​ ಬಳಗಾವಿ (28) ಮೃತ ಪಟ್ಟಿದ್ದಾನೆ. ಜೊತೆಗೆ ಗಣೇಶ್​ ಬಳಗಾವಿ (32) ಗಂಭೀರ ಗಾಯಗೊಂಡಿದ್ದ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *