ತುಮಕೂರು: ನಗರದ ಜಯಪುರ ಬಯಲು ಪ್ರದೇಶದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವಂತಹ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಸೋಲೂರು ಮೂಲದ ವ್ಯಕ್ತಿ ದಿಲೀಪ್ ಎಂದು ಗುರುತಿಸಲಾಗಿದೆ.

ಕೆಲವು ದಿನಗಳ ಹಿಂದೆ ಮೃತ ವ್ಯಕ್ತಿ ದಿಲೀಪ್ ವಿವಾಹಿತ ಮಹಿಳೆ ಅಮೃತ ಎಂಬಾಕೆಯನ್ನು ಪ್ರೀತಿಸಿ ಆಕೆಯ ಜೊತೆ ಓಡಿ ಹೋಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ತಿಲಕ್ ಪಾರ್ಕ್ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆಯನ್ನು ನಡೆಸಿದ್ದಾರೆ. ಮೃತ ದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.