ಹೆಂಡತಿಯಿಂದ ಮಾನಸಿಕ ಕಿರುಕುಳ : ಕೋರ್ಟ್ ಮೆಟ್ಟಿಲೇರಿದ ದೊಡ್ಮನೆ ಕುಡಿ

ದೊಡ್ಮನೆಯಲ್ಲಿ ಡಿವೋರ್ಸ್ ಬಿರುಗಾಳಿ ಎದ್ದಿದೆ. ರಾಘವೇಂದ್ರ ರಾಜ್‌ಕುಮಾರ್ ಪುತ್ರ ಯುವ ರಾಜ್‌ಕುಮಾರ್ ‌ ಅವರು ಪತ್ನಿ ವಿರುದ್ಧ ಮಾನಸಿಕ ಕಿರುಕುಳ ಆಗ್ತಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದಾರೆ. ಹೆಂಡತಿಯಿಂದ ಅಗೌರವ ಮತ್ತು ಮಾನಸಿಕವಾಗಿ ಕ್ರೌರ್ಯ ಎಂದು ಆರೋಪಿಸಿ ಶ್ರೀದೇವಿ ವಿರುದ್ಧ ಫ್ಯಾಮಿಲಿ ಕೋರ್ಟ್‌ನಲ್ಲಿ ಯುವ ಅರ್ಜಿ ಸಲ್ಲಿಸಿದ್ದಾರೆ

ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ

ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಕೆಲವು ತಿಂಗಳುಗಳಿಂದ ಜೊತೆಯಾಗಿ ಕೂಡ ವಾಸಿಸುತ್ತಿಲ್ಲ. `ಯುವ’ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ. ಸದ್ಯ ಯುವ ಪತ್ನಿ ವಿದೇಶದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.

ಮೈಸೂರು ಮೂಲದ ಶ್ರೀದೇವಿ ಅವರನ್ನು ಯುವ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆಯ ಮೇರೆಗೆ 2018ರಲ್ಲಿ ಯುವರಾಜ್‌ಕುಮಾರ್ ನಿಶ್ಚಿತಾರ್ಥ ನಡೆಯಿತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ

Leave a Reply

Your email address will not be published. Required fields are marked *