ಶೆಡ್​ಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು: ತಾಯಿ – ಮಗಳು ಸಜೀವ ದಹನ

ಬಾಗಲಕೋಟೆ: ಸಿಂಟೆಕ್ಸ್​​ನಲ್ಲಿ ಪೆಟ್ರೋಲ್ ಹಾಕಿ ಬಳಿಕ ಗುಡಿಸಲಿಗೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ – ಮಗಳು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ‌ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ. ಜೈಬಾನ ಪೆಂಡಾರಿ (60) ಮತ್ತು ಶಬಾನ ಪೆಂಡಾರಿ (20) ಸಜೀವ ದಹನಗೊಂಡ ತಾಯಿ – ಮಗಳು

ಅವಘಡದಲ್ಲಿ ಸಿದ್ದಿಕ್ಕಿ ಎಂಬಾತ ಬಚಾವಾಗಿದ್ದು, ದಸ್ತಗಿರಿಸಾಬ್ ಪೆಂಡಾರಿ ಎಂಬಾತ ಗಾಯಗೊಂಡಿದ್ದಾನೆ. ಚಿಕಿತ್ಸೆಗಾಗಿ ಮಹಾಲಿಂಗಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ ವೇಳೆ‌ ದಸ್ತಗಿರಸಾಬ್​ ಪೆಂಡಾರಿ ಅವರ ಕುಟುಂಬಸ್ಥರು ತೋಟದ ಶೆಡ್​​ನಲ್ಲಿ ಮಲಗಿದ್ದಾಗ ಯಾರೋ ದುಷ್ಕರ್ಮಿಗಳು ಸಿಂಟೆಕ್ಸ್​​ನಲ್ಲಿ‌ ಪೆಟ್ರೋಲ್‌ ತುಂಬಿ ಅದನ್ನು ಎರಡು ಹೆಚ್​​ಪಿ ಮೋಟಾರ್ ಸಹಾಯದಿಂದ ಶೆಡ್ಡಿಗೆ ಸಿಂಪಡಿಸಿ‌ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚುವ ಮುನ್ನ ಶೆಡ್ಡಿನ ಬಾಗಿಲನ್ನು ಲಾಕ್ ಮಾಡಿದ್ದಾರೆ

Leave a Reply

Your email address will not be published. Required fields are marked *