SC, ST ಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ.

SC, ST ಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ.

ಬೆಂಗಳೂರು: SC&ST ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್ಸಿಎಸ್ಪಿ-ಟಿಎಸ್ಪಿ (ಪರಿಶಿಷ್ಟ ಜಾತಿ ಉಪ ಯಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಪೈಕಿ 11,896.84 ಕೋಟಿ ರೂ. ಮೊತ್ತವನ್ನು ಗ್ಯಾರಂಟಿ ಯೋಜನೆಗೆ ಬಳಸಲು ಸರ್ಕಾರ ಚಿಂತನೆ ನಡೆಸಿದೆ.

ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಹಣ?

ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆಯಿಂದ ಯುವನಿಧಿ ಯೋಜನೆಗೆ 162 ಕೋಟಿ ರೂಪಾಯಿ, ಗೃಹಲಕ್ಷ್ಮೀ ಯೋಜನೆಗೆ 7,438 ಕೋಟಿ ರೂ., ಗೃಹಜ್ಯೋತಿಗೆ 2,626 ಕೋಟಿ ರೂ., ಶಕ್ತಿ ಯೋಜನೆಗೆ 1,537 ಕೋಟಿ ರೂ. ಹಾಗೂ ಅನ್ನಭಾಗ್ಯಕ್ಕೆ 1,670 ಕೋಟಿ ರೂ. ಬಳಕೆಗೆ ಸರ್ಕಾರ ಮುಂದಾಗಿದೆ.

ಕಳೆದ ಹಣಕಾಸು ವರ್ಷದಲ್ಲಿಯೂ ಎಸ್ಸಿಎಸ್ಪಿ-ಟಿಎಸ್ಪಿ ಅನುದಾನದಿಂದ ಒಂದು ಪಾಲನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿತ್ತು. ಸರ್ಕಾರದ ಈ ನಡೆಗೆ ದಲಿತ ಸಂಘಟನೆಗಳು, ವಿಪಕ್ಷಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದವು. ಕಳೆದ ಬಾರಿಯ ಅಧಿವೇಶನದಲ್ಲಿ ಕೂಡ ಇದೇ ವಿಚಾರಕ್ಕೆ ಜಟಾಪಟಿ ಆಗಿತ್ತು.

Leave a Reply

Your email address will not be published. Required fields are marked *