Budget 2025 : ದೇಶದ ಇಂಜಿನ್ ಕೃಷಿ – ನಿರ್ಮಲಾ ಸೀತಾರಾಮನ್

ಬೆಂಗಳೂರು || 'ರೈತರ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ'

ತಮ್ಮ ಬಜೆಟ್ ಭಾಷಣದಲ್ಲಿ, ಈ ಬಜೆಟ್ ರೈತರನ್ನು ಒಳಗೊಳ್ಳುವ ಬಜೆಟ್ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲವಾಗಲಿದೆ. ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ನಾವು ರಾಜ್ಯಗಳೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಶಿಕ್ಷಣ ಮತ್ತು ಆರೋಗ್ಯದ ಮೇಲೂ ನಮ್ಮ ಗಮನವಿದೆ. ಬಜೆಟ್ ನಲ್ಲಿ ರಫ್ತಿಗೂ ಒತ್ತು ನೀಡಲಾಗಿದೆ. ಕೃಷಿ ನಮ್ಮ ಮೊದಲ ಎಂಜಿನ್ ಎಂದು ನಿರ್ಮಲಾ ಹೇಳಿದ್ದಾರೆ.

ಧನ ಧಾನ್ಯ ಕೃಷಿ ಯೋಜನೆ ಘೋಷಣೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಮಾಡಿದರು. ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಘೋಷಿಸಿದ ನಿರ್ಮಲಾ, ಈ ಯೋಜನೆಯ ಮೂಲಕ 100  ಜಿಲ್ಲೆಗಳಲ್ಲಿ ಕಡಿಮೆ ಉತ್ಪಾದಕತೆಯನ್ನು ಕೇಂದ್ರೀಕರಿಸಿ ಸುಧಾರಿಸಲಾಗುವುದು. ಶೇಖರಣೆಯನ್ನು ಹೆಚ್ಚಿಸಿ ನೀರಾವರಿ ಸೌಲಭ್ಯವನ್ನು ಹೆಚ್ಚಿಸಬೇಕು. ಪ್ರಧಾನ ಮಂತ್ರಿ ಧನ ಧಾನ್ಯ ಯೋಜನೆಯಡಿ 1 ಕೋಟಿಗೂ ಹೆಚ್ಚು ರೈತರು ಪ್ರಯೋಜನ ಪಡೆಯಲಿದ್ದಾರೆ ಎಂದರು.

Leave a Reply

Your email address will not be published. Required fields are marked *