ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹ*: ಜಾನ್ಹವಿ ಆಕ್ರೋಶ.

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹ*: ಜಾನ್ಹವಿ ಆಕ್ರೋಶ.

ದೇಶಾದ್ಯಂತ ಆಕ್ರೋಶ; ನಟಿ ಜಾನ್ಹವಿ ಕಪೂರ್ ತೀವ್ರ ಪ್ರತಿಕ್ರಿಯೆ.

ಬಾಂಗ್ಲಾದೇಶ: ನೆರೆಯ ಬಾಂಗ್ಲಾದೇಶದಲ್ಲಿ ಹಿಂದು ಯುವಕ ದೀಪು ದಾಸ್ ಹತ್ಯೆ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕೆಲವು ಸಿನಿಮಾ ನಟಿಯರು ಸಹ ದೀಪಿ ದಾಸ್ ಹತ್ಯೆ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ವಿಶೇಷವಾಗಿ ನಟಿ ಜಾನ್ಹವಿ ಕಪೂರ್, ದೀಪು ದಾಸ್ ಹತ್ಯೆಯ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಮೌನ ವಹಿಸಿರುವುದನ್ನು ‘ಹಿಪಾಕ್ರಸಿ’ (ಬೂಟಾಟಿಕೆ) ಎಂದು ಕರೆದಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ಬರೆದುಕೊಂಡಿರುವ ನಟಿ ಜಾನ್ಹವಿ ಕಪೂರ್, ‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಅನಾಗರಿಕ. ಇದು ನರಮೇಧ. ಎಲ್ಲ ಘಟನೆಗಳಲ್ಲಿ ಒಂದು ಎಂಬಂತೇನಲ್ಲ. ಈ ಅಮಾನವೀಯ ಸಾರ್ವಜನಿಕ ಗುಂಪು ಹತ್ಯೆಯ ಬಗ್ಗೆ ನಿಮಗೆ ತಿಳಿದಿಲ್ಲದೇ ಇದ್ದರೆ, ಅದರ ಬಗ್ಗೆ ಓದಿ, ವೀಡಿಯೊಗಳನ್ನು ನೋಡಿ, ಪ್ರಶ್ನೆಗಳನ್ನು ಕೇಳಿ. ಇದೆಲ್ಲದರ ಹೊರತಾಗಿಯೂ ನಿಮಗೆ ಕೋಪ ಬರದಿದ್ದರೆ, ನಮಗೆ ತಿಳಿಯುವ ಮೊದಲೇ ನಮ್ಮನ್ನು ನಾಶಮಾಡುವ ಪ್ರಕ್ರಿಯೆಯ ದಾಳವಾಗಿದ್ದೀರಿ ಎಂದರ್ಥ. ನಮ್ಮ ಸ್ವಂತ ಸಹೋದರ ಸಹೋದರಿಯರು ಸುಟ್ಟು ಸಾಯುತ್ತಿರುವಾಗ ನಾವು ಪ್ರಪಂಚದಾದ್ಯಂತ ನಡೆಯುತ್ತಿರುವ ಬೇರೆ ವಿಷಯಗಳ ಬಗ್ಗೆ ಅಳುತ್ತಲೇ ಇರುತ್ತೇವೆ. ನಾವು ಸಂತ್ರಸ್ತರಾಗಲಿ ಅಥವಾ ಅಪರಾಧಿಗಳಾಗಲಿ, ಕೋಮು ಹಿಂಸಾಚಾರ ಮತ್ತು ತೀವ್ರಗಾಮಿತನವನ್ನು ಮೊದಲು ಖಂಡಿಸಬೇಕು. ನಾವು ಅದೃಶ್ಯ ರೇಖೆಯ ಎರಡೂ ಬದಿಗಳಲ್ಲಿ ವಾಸಿಸುತ್ತಿದ್ದೇವೆ ಎಂದು ನಂಬುವ ಪ್ಯಾದೆಗಳು. ಇದನ್ನು ಗುರುತಿಸಿ. ಮತ್ತು ಈ ಕೋಮು ಘರ್ಷಣೆಯಲ್ಲಿ ನಿರಂತರವಾಗಿ ಕಳೆದುಹೋಗುವ ಮತ್ತು ಭಯಭೀತರಾಗುವ ಮುಗ್ಧ ಜೀವಗಳ ಪರವಾಗಿ ನಿಲ್ಲಲು ಜ್ಞಾನದಿಂದ ನಿಮ್ಮನ್ನು ಸಜ್ಜುಗೊಳಿಸಿ’ ಎಂದಿದ್ದಾರೆ ಜಾನ್ಹವಿ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *