ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಾಗಿರುವ ಕ್ರಿಮಿನಲ್ ಮೊಕದಮೆಗಳು. ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿOದ ಮಾರಣಾಂತಿಕವಾಗಿ ಹಲ್ಲೆಗೈದು ಪೈತಮ್ಮ ಹಾಗೂ ಗಣೇಶ್ ಕುಮಾರ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ಗೊಲ್ಲಬಾಬು ಎಂಬಾತ ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ.
ಪತ್ನಿ, ಪ್ರಿಯಕರನ ಕೊಲೆ || ಪತಿ ಆತ್ಮಹತ್ಯೆ
