ಲಿಫ್ಟ್ ನೆಪದಲ್ಲಿ ಕೊ*.

ಲಿಫ್ಟ್ ನೆಪದಲ್ಲಿ ಕೊ*.

ಕಾರಿಗೆ ಬೆ*ಕಿ ಹಚ್ಚಿ ಸತ್ತೆನೆಂದು ನಾಟಕವಾಡಿದ ಬ್ಯಾಂಕ್ ಏಜೆಂಟ್.

ಮುಂಬೈ: ಮಹಾರಾಷ್ಟ್ರದ ಲಾತೂರಿನಲ್ಲಿ ಕಾರೊಂದು ಸುಟ್ಟುಕರಕಲಾದ ರೀತಿಯಲ್ಲಿ ಪತ್ತೆಯಾಗಿತ್ತು, ಅದರಲ್ಲಿ ಗೋಣಿಚೀಲದಲ್ಲಿದ್ದ ಶವಕೂಡ ಬೆಂದು ಹೋಗಿತ್ತು. ಈ ಕಾರು ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್​ನದ್ದು ಆದ ಕಾರಣ ಆತನೇ ಸಾವನ್ನಪ್ಪಿದ್ದಾನೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ನಡೆದಿರುವ ಘಟನೆಯೇ ಬೇರೆ, ಈ ಗಣೇಶ್ ಚೌಹಾಣ್ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವನಿಗೆ ಲಿಫ್ಟ್​ ಕೊಡುತ್ತೀನಿ ಎಂದು ಹತ್ತಿಸಿಕೊಂಡು ಕೊಂದೇ ಬಿಟ್ಟಿದ್ದ. ಬಳಿಕ ಆತನನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ.

ಆದರೆ ಗಣೇಶ್​ಗೆ ಮತ್ತೊಬ್ಬನನ್ನು ಕೊಲ್ಲುವ ಉದ್ದೇಶವಿರಲಿಲ್ಲ, ಒಟ್ಟಿನಲ್ಲಿ ತಾನು ಸತ್ತಿದ್ದೇನೆಂದು ಎಲ್ಲರೂ ತಿಳಿದುಕೊಳ್ಳಬೇಕೆಂಬ ಉದ್ದೇಶವಿದ್ದಿದ್ದು ಸ್ಪಷ್ಟವಾಗಿದೆ. ಕಾರಿನ ಮಾಲೀಕರನ್ನು ಪೊಲೀಸರು ಪತ್ತೆ ಹಚ್ಚಿದಾಗ ಅವರು ಅದನ್ನು ತಮ್ಮ ಸಂಬಂಧಿಕರೊಬ್ಬರಿಗೆ ನೀಡಿರುವುದು ಕಂಡುಬಂದಿತ್ತು. ಆ ವ್ಯಕ್ತಿ ಸಂಬಂಧಿ ಗಣೇಶ್​ ಚೌಹಾಣ್​ ಸಂಪರ್ಕಿಸಲು ಮುಂದಾದಾಗ ಆತ ಮನೆಗೆ ಬಂದಿಲ್ಲ, ಮೊಬೈಲ್ ಕೂಡ ಸ್ವಿಚ್ಡ್​ ಆಫ್ ಆಗಿದೆ ಎಂದು ಪೊಲೀಸರಿಗೆ ತಿಳಿಸಲಾಯಿತು.

ಈ ಎಲ್ಲಾ ಸಂಗತಿಗಳ ಆಧಾರದ ಮೇಲೆ ಮೃತಪಟ್ಟ ವ್ಯಕ್ತಿ ಗಣೇಶ್ ಎಂಬುದು ಆರಂಭಿಕ ಊಹೆಯಾಗಿತ್ತು. ಆದರೆ ಪೊಲೀಸರ ತನಿಖೆ ಮುಂದುವರೆದಂತೆ ಪೊಲೀಸರಿಗೆ ಹಲವು ಅಂಶಗಳು ಮನವರಿಕೆಯಾಗುತ್ತಾ ಹೋಗಿತ್ತು. ಆತನಿಗೆ ಓರ್ವ ಯುವತಿ ಜತೆ ಪ್ರೀತಿ ಇದೆ ಎಂಬುದು ತಿಳಿದುಬಂದಿತ್ತು.

ಆಕೆಯನ್ನು ಸಂಪರ್ಕಿಸಿದಾಗ ಈ ಘಟನೆಯ ಬಳಿಕ ಗಣೇಶ್ ಬೇರೊಂದು ನಂಬರ್​ ಬಳಸಿ ಆಕೆಗೆ ಸಂದೇಶ ಕಳುಹಿಸಿರುವುದು ತಿಳಿದುಬಂದಿತ್ತು. ಸತ್ತಿದ್ದಾನೆಂದು ಭಾವಿಸಿದ ವ್ಯಕ್ತಿ ಜೀವಂತವಾಗಿದ್ದಾನೆ ಎಂಬುದನ್ನು ಅರಿತ ಪೊಲೀಸರು ಹುಡುಕಾಟ ಆರಂಭಿಸಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *