ಮೈಸೂರು: ಸಹಾಯಕನಿಂದಲೇ ಅನ್ನದಾನೇಶ್ವರ ಸ್ವಾಮೀಜಿ ಕೊಲೆ

ಮೈಸೂರು: ಸಹಾಯಕನಿಂದಲೇ ಸ್ವಾಮೀಜಿ ಬರ್ಬರವಾಗಿ ಕೊಲೆಯಾದ ಘಟನೆ ನಗರದ ಸಿದ್ಧಾರ್ಥ ನಗರದಲ್ಲಿರುವ ಅನ್ನದಾನೇಶ್ವರ ಮಠದಲ್ಲಿ ಸೋಮವಾರ ನಡೆದಿದೆ. ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (92) ಸಹಾಯಕನಿಂದಲೇ ಕೊಲೆಯಾದವರು. ಅವರ ಸಹಾಯಕನಾಗಿದ್ದ ರವಿ (60) ಕೊಲೆ ಆರೋಪಿಯಾಗಿದ್ದು, ಹತ್ಯೆ ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾನಮತ್ತನಾಗಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ನಜರ್​​ಬಾದ್ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಸ್ವಾಮೀಜಿಯವರ ಸಂಬಂಧಿಕರಿಂದ ಮಾಹಿತಿ ಕಲೆ ಹಾಕಿದ್ದಾರೆ.

ಶಿವಾನಂದ ಸ್ವಾಮೀಜಿಗಳು ಸಂಸ್ಕೃತ ಪಾಠ ಶಾಲೆಯ ನಿವೃತ್ತ ಉಪನ್ಯಾಸಕರಾಗಿದ್ದರು. ಸಿದ್ಧಾರ್ಥ ನಗರದ ಬಳಿ ಅನ್ನದಾನೇಶ್ವರ ಮಠ ಸ್ಥಾಪಿಸಿ, ಬಡ ಮಕ್ಕಳಿಗೆ ಸಹಾಯ ಮಾಡುತ್ತಿದ್ದರು. ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಬಗ್ಗೆ ತನಿಖೆ ನಡೆಸಬೇಕು. ಮಠವು ನಗರದ ಪ್ರಮುಖ ಸ್ಥಳದಲ್ಲಿದ್ದು, ಅದರ ಮೇಲೆ ಕೆಲವು ರಿಯಲ್ ಎಸ್ಟೇಟ್ ವ್ಯಕ್ತಿಗಳ ಕಣ್ಣು ಬಿದ್ದಿತ್ತು. ಜೊತೆಗೆ ಮಠದ ಪಕ್ಕದಲ್ಲೇ ಸರ್ಕಾರಿ ಕೆರೆ ಇದ್ದು, ಅದರ ಉಳಿವಿಗಾಗಿ ಸ್ವಾಮೀಜಿ ಹೋರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *