ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಡಿಕೆ ಶಿವಕುಮಾರ್ಗೆ ಏಕೆ ನೋಟಿಸ್?
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿವೆ.
ಪಕ್ಷದ ಸಂಕಷ್ಟದ ಸಮಯದಲ್ಲಿ, ನಮ್ಮಂತಹ ಕಾಂಗ್ರೆಸ್ಸಿಗರು ಟ್ರಸ್ಟ್ಗಳ ಮೂಲಕ ಆ ಸಂಸ್ಥೆಗಳಿಗೆ ಸಹಾಯ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದಲ್ಲಿ ತಮಗೆ ಇಡಿ ನೋಟಿಸ್ ಬಂದ ಕೂಡಲೇ ಅಗತ್ಯವಿರುವ ಎಲ್ಲ ಮಾಹಿತಿ ಹಾಗೂ ಉತ್ತರಗಳನ್ನು ಈಗಾಗಲೇ ನೀಡಲಾಗಿದೆ. ಚಾರ್ಜ್ಶೀಟ್ ಕೂಡ ಸಲ್ಲಿಕೆಯಾಗಿದೆ. ಇದೀಗ ದೆಹಲಿ ಪೊಲೀಸರು ಈ ತಿಂಗಳ 19 ರೊಳಗೆ ಬಂದು ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಇದನ್ನು ಕಾನೂನಾತ್ಮಕವಾಗಿ ಪರಿಶೀಲಿಸುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಒಟ್ಟಾರೆ ಈ ಬೆಳವಣಿಗೆಯನ್ನು ಕಿರುಕುಳ ನೀಡುವ ಯತ್ನ ಎಂದು ಬಣ್ಣಿಸಿರುವ ಅವರು, ಇದು ಸರಿಯಲ್ಲ ಎಂದು ಖಂಡಿಸಿದ್ದಾರೆ.
For More Updates Join our WhatsApp Group :
