ಕರ್ನಾಟಕ ರಾಜ್ಯಕ್ಕೆ ನೂತನ ರಾಜ್ಯಪಾಲರ ನೇಮಕ : ರಾಷ್ಟ್ರಪತಿಗಳಿಂದ ಅಂಕಿತ

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಮಧ್ಯಪ್ರದೇಶ ಮೂಲದ ಬಿಜೆಪಿ ನಾಯಕರನ್ನು ನೇಮಕ ಮಾಡಿದ್ದು ಇದಕ್ಕೆ ರಾಷ್ಟ್ರಪತಿಗಳು ಅಂಕಿತ ನೀಡಿದ್ದಾರೆ.

ಹೌದು,, ದೇಶದ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಅದೇ ರೀತಿಯಾಗಿ ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೊಟ್ ಅವರನ್ನು ನೇಮಕ ಮಾಡಲಾಗಿದೆ.

ಮಧ್ಯಪ್ರದೇಶ ಮೂಲದವರಾದ ಅವರು ಮಾಜಿ ಕೇಂದ್ರ ಸಚಿವರಾಗಿದ್ದರು, ಮಧ್ಯಪ್ರದೇಶದ ಪ್ರಭಾವಿ ಬಿಜೆಪಿ ನಾಯಕರಾಗಿ ಗುರುತಿಸಿಕೊಂಡಿದ್ದ ಇವರನ್ನು ಇದೀಗ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಹಾಲಿ ರಾಜ್ಯದ ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಅವರ ಸ್ಥಾನಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.

Pragati TV Social Connect for more latest u

Leave a Reply

Your email address will not be published. Required fields are marked *