ದಾಖಲೆ ರಹಿತ ಪ್ರದೇಶಗಳಿಗೆ ಸರ್ಕಾರದ ಮಹತ್ವದ ಗುರುತಿನ ಪ್ರಕ್ರಿಯೆ.
ತುಮಕೂರು : ತುಮಕೂರು ಜಿಲ್ಲೆಯಲ್ಲಿ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ದಾಖಲಾತಿಯೊಳಗೆ ತರಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಜಿಲ್ಲೆಯಲ್ಲಿ ಸುಮಾರು 550 ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಅನೇಕ ತಾಂಡಗಳು, ಹಟ್ಟಿಗಳು ಹಾಗೂ ಇತರೆ ಜನವಸತಿ ಪ್ರದೇಶಗಳಲ್ಲಿ ಜನರು ಕಳೆದ 30–40 ವರ್ಷಗಳಿಂದ ವಾಸವಿದ್ದರೂ, ಅವುಗಳನ್ನು ಅಧಿಕೃತವಾಗಿ ಗ್ರಾಮಗಳೆಂದು ಗುರುತಿಸದೇ ಇದ್ದ ಕಾರಣ ಮೂಲಸೌಕರ್ಯ ಒದಗಿಸುವಲ್ಲಿ ಅಡಚಣೆ ಎದುರಾಗುತ್ತಿತ್ತು. ಗ್ರಾಮವಾಗಿ ಗುರುತು ಇಲ್ಲದಿದ್ದರೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುವುದಿಲ್ಲ. ಅಲ್ಲದೇ, ಈ ಪ್ರದೇಶಗಳ ನಿವಾಸಿಗಳಿಗೆ ಯಾವುದೇ ಸರ್ಕಾರಿ ಹಕ್ಕು ಪತ್ರಗಳು ಕೂಡ ಲಭ್ಯವಾಗಿರಲಿಲ್ಲ ಎಂದು ಅವರು ತಿಳಿಸಿದರು.
ಈ ಸಮಸ್ಯೆ ನಿವಾರಣೆಗೆ ಕಂದಾಯ ಗ್ರಾಮಗಳಲ್ಲಿರುವ ಜನರಿಗೆ ಹಕ್ಕು ಪತ್ರ ವಿತರಿಸುವ ಪ್ರಯತ್ನ ನಡೆಸಲಾಗಿದ್ದು, ಇದುವರೆಗೆ ಸುಮಾರು 10,000ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಈ ಸಂಖ್ಯೆಯಲ್ಲಿ ತುಮಕೂರು ಜಿಲ್ಲೆಯಿಂದಲೇ ಅತಿ ಹೆಚ್ಚು ಹಕ್ಕು ಪತ್ರ ವಿತರಣೆ ಆಗಿರುವುದು ವಿಶೇಷ ಎಂದು ಜಿಲ್ಲಾಧಿಕಾರಿ ಹೇಳಿದರು.
For More Updates Join our WhatsApp Group :




