ರಾಮನಗರ: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಚುನಾವಣೆಗೆ ಎರಡು ದಿನ ಇದ್ದಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣವನ್ನು ಹಾಕುತ್ತಾರೆ. ಇದನ್ನು ಚುನಾವಣಾ ಆಯೋಗ ಗಮನಿಸಬೇಕು ಸರ್ಕಾರದ ಹಣ ಕನ್ನಡಿಗರ ತೆರಿಗೆ ಹಣವನ್ನು ಚುನಾವಣೆ ವೇಳೆ ಹಾಕ್ತಾರೆ. ನಾವು ಹೋರಾಟ ಮಾಡುವುದು ಈ ವಿಚಾರದಲ್ಲಿ ಮಾಡಲ್ಲ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ನಾವು ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನಾನು ಎಲ್ಲಿ ಕಳೆದುಕೊಂಡಿದ್ದೇನೆ ಅಲ್ಲಿಯೇ ಹುಡುಕುತ್ತೇನೆ, ಇಲ್ಲಿಯೇ ಮುಂದಿನ ರಾಜಕೀಯ ಮುಂದುವರಿಸುತ್ತೇನೆ. ಕ್ಷೇತ್ರದಲ್ಲಿ ನಮ್ಮ ಪಕ್ಷದ ಮೇಲೆ ದೊಡ್ಡ ಮಟ್ಟದ ಅಭಿಮಾನ ಇದೆ ಪಕ್ಷದ ಕಾರ್ಯಕರ್ತರ ಜೊತೆಗೆ ನಾವು ಸದಾ ಇರುತ್ತೇನೆ ಎಂದು ನಿಖಿಲ್ ತಿಳಿಸಿದರು. ನಾನು ಸೋತಿದ್ದೇನೆ ಎಂದು ಮನೆಯಲ್ಲಿ ಕೂರುವ ಜಾಯಮಾನ ನಂದಲ್ಲ ಈ ಹೋರಾಟ ಹೊಸದೇನು ಅಲ್ಲ ನಮ್ಮ ಪಕ್ಷಕ್ಕೆ ನಾನು ಹೋರಾಟದ ಕಿಚ್ಚನ್ನು ನಾನು ರೂಡಿಸಿಕೊಂಡಿದ್ದೇನೆ ಎಂದ ನಿಖಿಲ್ ಕುಮಾರಸ್ವಾಮಿ.
ಚುನಾವಣೆಗೆ 2 ದಿನ ಇದ್ದಾಗ ಹಣ ಹಾಕ್ತಾರೆ, ನಿಖಿಲ್ ಗರಂ
