ಪರಿಶಿಷ್ಟ ಜಾತಿ ಬಾಲಕನ ಕುಟುಂಬಕ್ಕೆ ಸಿಕ್ತು ಒಂದು ಲಕ್ಷ ಪರಿಹಾರ..!

ಕೋಲಾರ : ಜಿಲ್ಲೆಯ ಮಾಲೂರು ತಾಲ್ಲೂಕಿನ ಉಲ್ಲೇರಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ  ಬಾಲಕ ದೇವರನ್ನು ಮುಟ್ಟಿದ ಎಂಬ ಕಾರಣಕ್ಕೆ 60 ಸಾವಿರ ದಂಡ ಹಾಕಿದ ಪ್ರಕರಣದ ಹಿನ್ನೆಲೆಯಲ್ಲಿ ಇಂದು ಶಾಸಕ ಕೆ ವೈ ನಂಜೇಗೌಡ ದೌರ್ಜನ್ಯಕ್ಕೆ ಒಳಗಾದವರ ಮನೆಗೆ ತೆರಳಿ ಆರ್ಥಿಕ ಸಹಾಯ ಮಾಡಿ, ದಿನಸಿ ಕಿಟ್ ನೀಡಿ ಅವರ ಮನೆಯಲ್ಲೇ ಊಟ ಮಾಡಿ ಆತ್ಮ ಸ್ಥೈರ್ಯ ತುಂಬಿ,  ಬಾಲಕನ ಕುಟುಂಬಕ್ಕೆ  ಸಿಗಬೇಕಾದ ಸವಲತ್ತುಗಳನ್ನು ಕೊಡಿಸುವ ಭರವಸೆ ನೀಡಿ ನಾವು ನಿಮ್ಮ ಜೊತೆಗಿರುತ್ತೇವೆಂದು ಭರವಸೆ ನೀಡಿದರು.

ಇದೇ ವೇಳೆ ಶಾಸಕರು ಬಾಲಕನ ಕುಟುಂಬಕ್ಕೆ ಒಂದು ಲಕ್ಷ ವಯುಕ್ತಿಕ ಪರಿಹಾರ ನೀಡಿದರು. ಕುಟುಂಬಕ್ಕೆ ಮನೆಯನ್ನು ಶ್ರೀಘದಲ್ಲಿ ಕಲ್ಪಿಸಿ ಕೊಡುವ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಕೆ.ವೈ ನಂಜೇಗೌಡ ಗ್ರಾಮಗಳಲ್ಲಿ ಇಂತಹ ಘಟನೆಗಳು ನಡೆಯಬಾರದು, ನನ್ನ ಕ್ಷೇತ್ರದಲ್ಲಿ ಇಂತಹ ಘಟನೆಗಳು ನಡೆದಿರುವುದು ನನಗೆ ವಯುಕ್ತಿಕವಾಗಿ ತುಂಬಾ ನೋವು ಅಗಿದೆ. ಘಟನೆಗೆ ಕಾರಣರಾದವರು ಯಾರೇ ಅಗಲಿ ಅವರನ್ನು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದರು. ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ರು.

ಇನ್ನೂ ಶಾಸಕರು ಗ್ರಾಮದ ಮುಖಂಡರ ಜೊತೆ ಮಾತನಾಡಿ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ ಎಲ್ಲರೂ ಒಗ್ಗಟ್ಟಿನಿಂದ ಶಾಂತಿಯುತವಾಗಿ ಬಾಳ್ವೆ ನಡೆಸಬೇಕೆಂದು ಮನವಿ ಮಾಡಿದ್ರು.

Pragati TV Social Connect for more latest u

Leave a Reply

Your email address will not be published. Required fields are marked *