ರಾಯಚೂರಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿರುದ್ಧ ಆಕ್ರೋಶ: ಜಾಮೀನು ವಿಚಾರಣೆ ಇಂದು.

ರಾಯಚೂರಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿರುದ್ಧ ಆಕ್ರೋಶ: ಜಾಮೀನು ವಿಚಾರಣೆ ಇಂದು.

ರಾಯಚೂರು:ಸೌಜನ್ಯ ಹೋರಾಟಗಾರ ಮತ್ತು ಧರ್ಮಸ್ಥಳ ‘ಬುರುಡೆ’ ಪ್ರಕರಣದ ಪ್ರಮುಖ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿರುವುದಕ್ಕೆ ಖಟ್ಟಿನ ವಿರೋಧ ವ್ಯಕ್ತವಾಗಿದೆ. ದಲಿತ ಸೇನೆ ಮತ್ತು ಸಮಾನ ಮನಸ್ಕರ ವೇದಿಕೆ ಈ ನಿರ್ಧಾರವನ್ನು ಖಂಡಿಸಿ, “ಮಹೇಶ್ ಶೆಟ್ಟಿ ತಿಮರೋಡಿ ರಾಯಚೂರಿಗೆ ಬೇಡ” ಎಂದು ಬಲವಾಗಿ ಒತ್ತಾಯಿಸಿದೆ. ಅಲ್ಲದೆ, ತಿಮರೋಡಿಯನ್ನು ಯಾವುದಾದರೂ ಕಾಡಿಗೆ ಕಳುಹಿಸುವಂತೆ ಆಗ್ರಹಿಸುತ್ತಿದ್ದಾರೆ.

ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಯ ವಿರುದ್ಧ ಸಭೆ ಆಯೋಜಿಸಿದೆ.

ಮಹೇಶ್ ಶೆಟ್ಟಿ ತಿಮರೋಡಿ ಮೇಲಿರುವ ಪ್ರಕರಣಗಳು:
1992ರಿಂದ ಇತ್ತೀಚಿನವರೆಗೆ ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಒಟ್ಟು 26 ಪ್ರಕರಣಗಳು ದಾಖಲಾಗಿವೆ. ಈಗಿಂತ 13 ಪ್ರಕರಣಗಳು ತೆರವುಗೊಂಡಿದ್ದು, ಇನ್ನಷ್ಟು ಪ್ರಕರಣಗಳು ತನಿಖೆಯಲ್ಲಿವೆ. 1998ರಲ್ಲಿ ರೌಡಿ ಶೀಟ್ ಕೂಡ ತಯಾರಾಗಿದ್ದು, ಜಾತಿ-ಧರ್ಮ ನಡುವಣ ವೈಷಮ್ಯ ಉಂಟುಮಾಡಿ ಸಮಾಜದಲ್ಲಿ ಅಶಾಂತಿ ಹರಡುವ ಆರೋಪ ತಿಮರೋಡಿಗೆ ಹೊರಹೊಮ್ಮಿದೆ. ಸೌಜನ್ಯ ಹತ್ಯೆ ಪ್ರಕರಣ ಸೇರಿದಂತೆ, ಪೊಲೀಸ್ ಮತ್ತು ಸರ್ಕಾರದ ವಿರುದ್ಧ ತೀವ್ರ ಆಕ್ಷೇಪಣೆ ಮಾಡಿದುದರಿಂದ ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಗೆ ಧಕ್ಕೆ ಆಗಿದೆ ಎಂದು ವರದಿಯಲ್ಲಿ ಉಲ್ಲೇಖವಿದೆ.

ನಿರೀಕ್ಷಣಾ ಜಾಮೀನು ವಿಚಾರಣೆ:
ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹಣೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಇಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಪರಿಶೀಲನೆಗೆ ಒಳಪಡಲಿದೆ. ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎಂದು ಅನಿಸುತ್ತಿದ್ದು, ಸರ್ಕಾರಿ ಅಭಿಯೋಜಕರು ಜಾಮೀನಿಗೆ ವಿರೋಧವಾಗಿ ಕಾಲಾವಕಾಶ ಕೇಳಬಹುದಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *