ಹುಬ್ಬಳ್ಳಿ:ರಾಜ್ಯದಲ್ಲಿ ದೊಡ್ಡ ಪ್ರಮಾಣದ ಅರಣ್ಯ ಅತಿಕ್ರಮಣವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3 ಎಕರೆಗಿಂತ ಕಡಿಮೆ ಅರಣ್ಯ ಪ್ರದೇಶ ಅತಿಕ್ರಮಣ ಮಾಡಿರುವ ಬಡವರು, ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಯಾರೂ ದೊಡ್ಡ ಪ್ರಮಾಣದಲ್ಲಿ ಅರಣ್ಯ ಅತಿಕ್ರಮಣ ಹಾಗೂ ನಾಶ ಮಾಡಿದ್ದಾರೆಯೋ ಅಥವರ ವಿರುದ್ಧ ಕ್ರಮ ಕೈಗೊಳ್ಳಲೇ ಬೇಕಾಗುತ್ತದೆ ಎಂದರು.
ತಿರುಪತಿ ಲಡ್ಡು ವಿಚಾರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಜಗಮೋಹನ್ ರೆಡ್ಡಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ನನಗೆ ಗೊತ್ತಿಲ್ಲ.ಹಾಗಾಗಿ ಈ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ರಾಜರಾರಣದಲ್ಲಿ ಇರುವರು ಜನರ ಸೇವೆ ಮಾಡಬೇಕು. ಅದನ್ನು ಬಿಟ್ಟು ಜನರನ್ನು ಶೋಷಣೆ ಮಾಡುವುದು, ಬ್ಲ್ಯಾಕ್ ಮೇಲ್ ಮಾಡುವುದು ಮಹಾದ್ರೋಹ. ಶಾಸಕ ಮುನಿರತ್ನ ಅವರಂಥವರು ರಾಜಕೀಯ ಜೀವನದಲ್ಲಿ ಇರಲು ಲಾಯಕ್ ಇಲ್ಲ. ಹಿಂದೆ ನಮ್ಮ ಪಕ್ಷದಲ್ಲಿ ಇದ್ದರೂ ಎಂಬುದು ಮುಖ್ಯವಲ್ಲ. ಯಾವುದೇ ಪಕ್ಷದಲ್ಲಿದ್ದರೂ ವ್ಯಕ್ತಿಯಲ್ಲ ಮಾನವೀಯ ಮೌಲ್ಯ, ನೈತಿಕ ಗುಣಗಳು ಇರಬೇಕು ಎಂದರು.