ಇಂದಿಗೆ ಪ್ರಜ್ವಲ್ SIT ಕಸ್ಟಡಿ ಮುಕ್ತಾಯ : ಏನಾಗಲಿದೆ ಪ್ರಜ್ವಲ್ ಭವಿಷ್ಯ.?

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಪ್ರಜ್ವಲ್ ಕಸ್ಟಡಿ ಅಂತ್ಯಗೊಳ್ಳಲಿದ್ದು, ಕೋರ್ಟ್ ಗೆ ಹಾಜರುಪಡಿಸಲಿರುವ ಎಸ್ ಐ ಟಿ ಅಧಿಕಾರಿಗಳು ಮತ್ತೆ ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಅಥವಾ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ನೀಡುವ ಸಾಧ್ಯತೆಯಿದೆ. ಪ್ರಜ್ವಲ್ ರೇವಣ್ಣರನ್ನು 1 ವಾರ ಅಂದರೆ ಜೂನ್ 6 ವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 42 ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿತ್ತು.

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದು, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ.ನಂತರ ಪ್ರಜ್ವಲ್ ರೇವಣ್ಣರನ್ನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಎಸ್ ಐ ಟಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಿತ್ತು.

Leave a Reply

Your email address will not be published. Required fields are marked *