‘Dhurandhar 2’ ನಟನಿಗೆ ಪ್ರಶಾಂತ್ ನೀಲ್ ನೀಡಿದ ಹೊಸ ಅವಕಾಶ.

'Dhurandhar 2' ನಟನಿಗೆ ಪ್ರಶಾಂತ್ ನೀಲ್ ನೀಡಿದ ಹೊಸ ಅವಕಾಶ.

ಬಿಮಲ್ ಓಬೆರಾಯ್ ಜೂನಿಯರ್ ಎನ್ಟಿಆರ್ ಚಿತ್ರದಲ್ಲಿ ವಿಲನ್ ಪಾತ್ರಕ್ಕೆ ಮುಂದಾಗುತ್ತಾರಾ?

ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಬಳಿಕ ದೊಡ್ಡ ಗೆಲುವು ಕಂಡರು. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯಿತು. ಈ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​​ಟಿಆರ್ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಈ ಚಿತ್ರಕ್ಕೆ ‘ಧುರಂಧರ್’ ನಟನ ಎಂಟ್ರಿ ಆಗಿದೆ. ಅದೂ ವಿಲನ್ ಆಗಿ ಎನ್ನಲಾಗುತ್ತಿದೆ.

‘ಧುರಂಧರ್’ ಹಾಗೂ ‘ಧುಂಧರ್ 2’ ಚಿತ್ರವನ್ನು ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದರು. ಈ ಎರಡೂ ಚಿತ್ರಗಳು ಮೆಚ್ಚುಗೆ ಪಡೆದಿವೆ. ‘ಧುರಂಧರ್’ ಸಿನಿಮಾ 1300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದರೆ, ‘ಧುರಂದರ್ 2’ ಸಿನಿಮಾ 2 ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ಶಿರಾನಿ ಬಲೂಚ್ ಪಾತ್ರದಲ್ಲಿ ಬಿಮಲ್ ಓಬೆರಾಯ್ ಕಾಣಿಸಿಕೊಂಡಿದ್ದರು.

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಚಿತ್ರದ ಶೂಟ್ ನಿರಂತರವಾಗಿ ವಿಳಂಬ ಆಗುತ್ತಿದೆ, ಸಿನಿಮಾ ನಿಂತು ಹೋಗುತ್ತದೆ ಎಂಬೆಲ್ಲ ವರದಿ ಇದ್ದವು. ಅದ್ಯಾವುದೂ ಸತ್ಯವಾಗಿಲ್ಲ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *