ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿರ್ವಹಣೆ ಸಲುವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ವಿವಿಧ ಊರುಗಳಿಗೆ 2,500 ಹೆಚ್ಚುವರಿ ಬಸ್ಗಳನ್ನು ಘೋಷಿಸಿದೆ. ಈ ಹೆಚ್ಚುವರಿ ಬಸ್ ಟ್ರಿಪ್ಗಳು ಅಕ್ಟೋಬರ್ 17 ರಿಂದ 20 ರವರೆಗೆ ಇರಲಿದ್ದು, ಅಕ್ಟೋಬರ್ 22 ರಿಂದ 26 ರವರೆಗೆ ಹಿಂತಿರುಗುವ ಪ್ರಯಾಣವನ್ನು ನಿಗದಿಪಡಿಸಲಾಗಿದೆ. ಪ್ರಯಾಣಿಕರು ಕೆಎಸ್ಆರ್ಟಿಸಿ ರಿಸರ್ವೇಷನ್ ಕೌಂಟರ್ಗಳಲ್ಲಿ ಅಥವಾ www.ksrtc.karnataka.gov.in ಮೂಲಕ ಆನ್ಲೈನ್ನಲ್ಲಿ ಟಿಕೆಟ್ಗಳನ್ನು ಬುಕ್ ಮಾಡಬಹುದಾಗಿದೆ ಎಂದು ನಿಗಮ ತಿಳಿಸಿದೆ.
ಮೈಸೂರು ರೋಡ್ ಸ್ಯಾಟಲೈಟ್ ನಿಲ್ದಾಣದಿಂದ ಎಲ್ಲಿಗೆಲ್ಲ ಸ್ಪೆಷಲ್ ಬಸ್?
ಮೈಸೂರು ರೋಡ್ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ ಮತ್ತು ಕೊಡಗು ಪ್ರದೇಶದ ಇತರ ಪ್ರದೇಶಗಳಿಗೆ ಹೆಚ್ಚುವರಿ ಬಸ್ಸುಗಳ ಸಂಚಾರ ಇರಲಿದೆ. ಏತನ್ಮಧ್ಯೆ, ಶಾಂತಿನಗರದಿಂದ ಟಿಟಿಎಂಸಿ ಚೆನ್ನೈ, ಕೊಯಮತ್ತೂರು, ಮಧುರೈ ಮತ್ತು ಎರ್ನಾಕುಲಂ ಸೇರಿದಂತೆ ತಮಿಳುನಾಡು ಮತ್ತು ಕೇರಳದ ಜನಪ್ರಿಯ ನಗರಗಳಿಗೆ ಬಸ್ಸುಗಳು ಸಂಚಾರ ಮಾಡಲಿವೆ.
ದೀಪಾವಳಿ ಹಬ್ಬ: ನೈಋತ್ಯ ರೈಲ್ವೆಯಿಂದ ಈ ಊರುಗಳಿಗೆ ವಿಶೇಷ ರೈಲು!
ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳು
ಹಬ್ಬದ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್ಆರ್ಟಿಸಿ ಜೊತೆಗೆ, ನೈಋತ್ಯ ರೈಲ್ವೆ ಕೂಡ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಹೆಚ್ಚುವರಿ ರೈಲುಗಳಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕೊಲ್ಲಂ ಎಕ್ಸ್ಪ್ರೆಸ್, ಕೆಎಸ್ಆರ್ ಬೆಂಗಳೂರು-ಟುಟಿಕೋರಿನ್ ಎಕ್ಸ್ಪ್ರೆಸ್ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ ಸೇರಿವೆ.
For More Updates Join our WhatsApp Group :




