ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ನೇರವಾಗಿ ಕೇಂದ್ರಕ್ಕೆ ಭೇಟಿ ನೀಡಿ ಉತ್ಪನ್ನವನ್ನು ಮಾರಾಟ ಮಾಡಬೇಕು ಎಂದು ಕರೆ ನೀಡುವ ಮೂಲಕ, ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ ರಾಜ್ಯದಲ್ಲಿ 2024-25ರ ಹಿಂಗಾರು ಬೆಳೆ ಯೋಜನೆಯಡಿ ಕಡಲೇ ಕಾಳು ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭಾರತ ಸರ್ಕಾರದ ಕೃಷಿ ಸಚಿವಾಲಯ 96,498 ಮೆಟ್ರಿಕ್ ಟನ್ ಕಡಲೇ ಕಾಳು ಖರೀದಿ ಮಾಡಲು ಅನುಮತಿ ನೀಡಿದ್ದು, ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ.
ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಈಂಕಿ ಗುಣಮಟ್ಟದ ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಮೂಲಕ ಖರೀದಿಸಲಾಗುತ್ತದೆ.
ಕೇಂದ್ರ ಸರ್ಕಾರವು ಕಡಲೆಕಾಳು ಉತ್ಪನ್ನಕ್ಕೆ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ಗೆ ರೂ. 5,6350. ರೈತರಿಂದ ಈ ದರದಲ್ಲಿಯೇ ಖರೀದಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ರೈತರು ಉತ್ಪನ್ನ ಮಾರಾಟ ಮಾಡಲು ಮೊದಲು ನೋಂದಣಿ ಮಾಡಿಸಬೇಕು.
ಬೇಕಾಗುವ ದಾಖಲೆಗಳು: ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಉತ್ಪನ್ನ ಮಾರಾಟ ಮಾಡಲು ಆಧಾರ್ ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಕಡ್ಡಾಯವಾಗಿದೆ. ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾOಶದಲ್ಲಿ ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿಯನ್ನು ನೋಂದಣಿ ಸಮಯದಲ್ಲಿ ನೀಡಬೇಕು. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ಕೃಷಿ ಇಲಾಖೆ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದು. ಒಣಗಿದ ಹಾಗೂ ಸ್ವಚ್ಛ ಈಂಕಿ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು. ನಿಗದಿತ ಅವಧಿಯೊಳಗೆ ನೋಂದಾಯಿಸಿಕೊAಡ ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಾಲ್ನಿOದ ಗರಿಷ್ಠ 20ಕ್ವಿಂಟಾಲ್ ಮಾತ್ರ ಖರೀದಿಸಲಾಗುತ್ತದೆ. ಕಡಲೆಕಾಳು ಉತ್ಪನ್ನವನ್ನು ೯೦ ದಿನಗಳವರೆಗೆ ಬೆಳಗ್ಗೆ 9 ಗಂಟೆಯಿOದ ಸಂಜೆ 5 ಗಂಟೆಯವರೆಗೆ ಮಾತ್ರ ಖರೀದಿಸಲಾಗುತ್ತದೆ.