ಟೀಸರ್ ಬಿಡುಗಡೆಯ ನಂತರ ಯಶ್ ಪಾತ್ರ ಮೆಚ್ಚುಗೆ ಗಳಿಸಿದಂತೆ, ಚರ್ಚೆ ಉಂಟುಮಾಡಿದ ರಾವಣನ ದೃಶ್ಯ.
ರಾಕಿಂಗ್ ಸ್ಟಾರ್ ಯಶ್, ರಣಬೀರ್ ಕಪೂರ್, ಸನ್ನಿ ಡಿಯೋಲ್, ಸಾಯಿ ಪಲ್ಲವಿ ಸೇರಿದಂತೆ ಅನೇಕರು ‘ರಾಮಾಯಣ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಟೀಸರ್ ಹೊಗಳಿದರೆ ಇನ್ನೂ ಕೆಲವರು ಇದನ್ನು ಎಐ ವಿಡಿಯೋ ಎಂದು ಕರೆದಿದ್ದಾರೆ. ಹೀಗಿರುವಾಗಲೇ ರಾವಣನ ಪಾತ್ರ ಮಾಡಿದ ಯಶ್ ಅವರನ್ನು ರಣಬೀರ್ ಕಪೂರ್ ಹಾಡಿ ಹೊಗಳಿದ್ದಾರೆ.
‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 2ರಂದು ರಿಲೀಸ್ ಆದ ಟೀಸರ್ ಅಲ್ಲಿ ರಾಮನ ಪಾತ್ರವನ್ನೇ ಹೈಲೈಟ್ ಮಾಡಲಾಗಿದೆ. ಹನುಮ ಜಯಂತಿಯಂದು ಟೀಸರ್ ರಿಲೀಸ್ ಆಗಿದೆ. ಆದರೆ, ಹನುಮಂತನ ಪಾತ್ರವನ್ನೇ ತೋರಿಸಿಲ್ಲ. ಇದು ಚರ್ಚೆಗೆ ಕಾರಣ ಆಗಿದೆ. ಸಿನಿಮಾದಲ್ಲಿ ಯಶ್ ಮುಖ ತೋರಿಸದೇ ಇದ್ದರೂ ಅವರ ಪಾತ್ರ ಗಮನ ಸೆಳೆಯುವ ರೀತಿಯಲ್ಲಿ ಇದೆ.
‘ರಾಮಾಯಣ’ ಸಿನಿಮಾದಲ್ಲಿ ಯಶ್ ಪಾತ್ರ ಪ್ರಮುಖವಾಗಲಿದೆ. ಏಕೆಂದರೆ ಅವರು ಮಾಡುತ್ತಿರುವುದು ರಾವಣನ ಪಾತ್ರ. ಈ ಪಾತ್ರ ಹೇಗಿದೆ ಎಂಬುದರ ಝಲಕ್ ತೋರಿಸಲಾಗಿದೆ. ಆದರೆ, ಪಾತ್ರ ಸಂಪೂರ್ಣವಾಗಿ ರಿವೀಲ್ ಮಾಡಿಲ್ಲ. ಯಶ್ ಬಗ್ಗೆ ಹಾಗೂ ಅವರ ಜನಪ್ರಿಯತೆ ಬಗ್ಗೆ ರಣಬೀರ್ ಮಾತನಾಡಿದ್ದಾರೆ.
‘ಯಶ್ ಅವರು ಸಾಕಷ್ಟು ಸ್ಟಾರ್ಡಂ ಜೊತೆ ಬಂದಿದ್ದಾರೆ. ರಾವಣನ ಪಾತ್ರ ಮಾಡಲು ಅಷ್ಟು ಜನಪ್ರಿಯತೆ ಇರಬೇಕು. ರಾವಣನ ಬಗ್ಗೆ ಅವರಿಗೆ ಇರುವ ವ್ಯಾಖ್ಯಾನ ಬೇರೆಯದೇ ಇದೆ. ಇದನ್ನು ಪ್ರೇಕ್ಷಕರು ಎಂಜಾಯ್ ಮಾಡುತ್ತಾರೆ’ ಎಂದು ರಣಬೀರ್ ಕಪೂರ್ ಹೇಳಿದ್ದಾರೆ.
For More Updates Join our WhatsApp Group :




