ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಆರೆಂಜ್, ಯೆಲ್ಲೋ ಅಲರ್ಟ್ : ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಾಧಾರಣ ಮಳೆ : ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ವಿಜಯನಗರ, ಗದಗ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಎಲ್ಲೆಲ್ಲಿ ಮಳೆ : ಮೂಡುಬಿದಿರೆ, ಶೃಂಗೇರಿ, ಕಳಸ, ಭಾಗಮಂಡಲ, ತ್ಯಾಗರ್ತಿ, ಬಾಳೆಹೊನ್ನೂರು, ಆಗುಂಬೆ, ಹೊನ್ನಾವರ, ಕಾರವಾರ, ಮಂಕಿ, ಶಿರಾಲಿ, ಸಿದ್ದಾಪುರ, ಕೋಟಾ, ಕ್ಯಾಸಲ್ರಾಕ್, ಕುಮಟಾ, ಗೋಕರ್ಣ, ಕದ್ರಾ, ಮಂಗಳೂರು, ಶಕ್ತಿನಗರ, ಕುಂದಾಪುರ, ಮಂಗಳೂರು, ಕಾರ್ಕಳ, ಅಂಕೋಲಾದಲ್ಲಿ ಗುರುವಾರ ಭಾರಿ ಮಳೆಯಾಗಿದೆ.
ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಬೀದರ್, ಕಮ್ಮರಡಿ, ಕೊಟ್ಟಿಗೆಹಾರ, ಕೊಪ್ಪ, ಜಯಪುರ, ಬಂಟವಾಳ, ಜೋಯ್ಡಾ, ಸುಳ್ಯ, ಭಾಲ್ಕಿ, ಸೋಮವಾರಪೇಟೆ, ಗುರುಮಿಟ್ಕಲ್, ಯಲ್ಲಾಪುರ, ಬನವಾಸಿ, ಮುದ್ದೇಬಿಹಾಳ, ದಾವಣಗೆರೆ, ತರೀಕೆರೆ, ಜಗಳೂರು, ಭರಮಸಾಗರ, ಅಜ್ಜಂಪುರ, ಚನ್ನಗಿರಿ, ಹಾರಂಗಿ, ಕುಶಾಲನಗರ, ಹಾರಂಗಿ, ದಾವಣಗೆರೆ, ಕಕ್ಕೇರಿ, ಖಾನಾಪುರ, ತಾಳಿಕೋಟೆ, ಶಿಗ್ಗಾಂವ್, ಕಲಘಟಗಿ, ಹುಣಸಗಿ, ಹಿರೆಕೆರೂರು, ಜೇವರ್ಗಿ, ಗಬ್ಬೂರು, ಮಾನ್ವಿ, ಮುಂಡಗೋಡಿನಲ್ಲಿ ಸಾಧಾರಣ ಮಳೆಯಾಗಿದೆ.